Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ