Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ