ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ ನೀಡುತ್ತಾರೆ.ಆಕಳು ಶ್ರೇಷ್ಠ,ಅದರ ಸೆಗಣಿ,ಮೂತ್ರ ಶ್ರೇಷ್ಠ ಎನ್ನುತ್ತಾರೆ.ಆದರೆ ಏನು ಮಾತನಾಡುತ್ತಾರೆಯೋ ಅದರಂತೆ ಅವರೇ ನಡೆದುಕೊಳ್ಳುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಹೇಳಿದರು.

ಪಟ್ಟಣದ ಹುಡ್ಕೋದ ಹೇಮರಡ್ಡಿ ಮಲ್ಲಮ್ಮ ವೃತ್ತದ ಬಳಿ ಇರುವ ಗಾರ್ಡನ್‌ದಲ್ಲಿ ಬುಧವಾರ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನ ಹಾಗೂ ಲಿಂಗೈಕ್ಯ ಚೆನ್ನಣ್ಣ ದೇಸಾಯಿ ಅವರ ಐದನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿಶ್ವ ದಾಸೋಹ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗದಗ ಜಿಲ್ಲೆ ಕಪ್ಪತ್ತಗುಡ್ಡಕ್ಕೆ ನಮ್ಮ ಸ್ನೇಹಿತರೊಂದಿಗೆ ಭೇಟಿ ನೀಡಿದಾಗ ಅಲ್ಲಿ ಒಬ್ಬರೇ ಸ್ವಾಮೀಜಿ ಇದ್ದರು. ಪರಿಸರದ ಉಳಿವಿಗಾಗಿ ಅಮೂಲ್ಯ ಪ್ರಕೃತಿಕ ಸಂಪತ್ತಿನ ರಕ್ಷಣೆಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಕಪ್ಪತ್ತಗುಡ್ಡದ ಅರಣ್ಯವನ್ನು ರಕ್ಷಿತಾರಣ್ಯ ಎಂದು ಸುಪ್ರೀಂಕೋರ್ಟ್ನಲ್ಲಿ ಆದೇಶ ಬರುವಂತೆ ಮಾಡಿದ ಕೀರ್ತಿ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲುತ್ತದೆ.ಇಂತಹವರು ಸಿದ್ದೇಶ್ವರ ಸ್ವಾಮಿಜಿಗಳ ನಿಜವಾದ ಶಿಷ್ಯಂದಿರು.ಇAತಹ ಕಾರ್ಯಗಳು ಸಿದ್ದೇಶ್ವರ ಶ್ರೀಗಳಿಗೆ ಸಲ್ಲಿಸಿದ ನಿಜವಾದ ಗೌರವ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಮುಧೋಳದ ಡಾ.ಶಿವಾನಂದ ಕುಬಸದ ಮಾತನಾಡಿ , ಅಮೂರ್ತ ರೂಪದಲ್ಲಿರುವ ದೇವರನ್ನು ನಾನು ನಂಬುವುದಿಲ್ಲ.ಆದರೆ ದಾಸೋಹ,ಕಾಯಕವನ್ನು ಗೌರವಿಸುತ್ತೇನೆ.ಎಂದಿಗೂ ನಾನು ದೇವರಿಗೆ ಕೈ ಮುಗಿದಿಲ್ಲ.ದೇಸಾಯಿ ಅವರಿಗೆ ಮನೆತನದ ಸಂಸ್ಕಾರ ಇತ್ತು, ಒಳ್ಳೆಯದನ್ನು ಸ್ವೀಕರಿಸುವ ಗುಣವಿತ್ತು.ನಾನು ಮಾನವತೆಯೇ ದೇವರು ಎಂದು ನಂಬಿದ್ದೇನೆ.ಇAತಹ ಜನಪರ ಕಾರ್ಯಗಳ ಮೂಲಕ ಪ್ರಭುಗೌಡ ದೇಸಾಯಿ ಎತ್ತರದ ಮಟ್ಟಕ್ಕೆ ತಲುಪಿದ್ದಾರೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಎಲ್ಲವೂ ಶ್ರೇಷ್ಠವಾಗಿದೆ.ಮುಖದಲ್ಲಿ ನಗು ಇರಲಿ.ಜಿಲ್ಲೆಯಲ್ಲಿ ಹಾಸ್ಟೆಲ್‌ಗಳಲ್ಲಿ ಸ್ವಚ್ಛತಾ ಅಭಿಯಾನ,ಐಎಎಸ್ ಕೆಎಎಸ್ ತರಬೇತಿ ನೀಡುವ ಕಾರ್ಯ ಆರಂಭಿಸಿದ್ದೇವೆ ಎಂದರು.

ಕಪ್ಪತ್ತಗುಡ್ಡ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ, ಸಿಂಧಗಿಯ ಪ್ರಭು ಸಾರಂಗ ಶಿವಾಚಾರ್ಯರು,ಮಸೂತಿಯ ಪ್ರಭುಕುಮಾರ ಸ್ವಾಮೀಜಿ,ಗುಳೇದಗುಡ್ಡ ಕಾಶಿನಾಥ ಸ್ವಾಮೀಜಿ, ಪಡೇಕನೂರ ದಾಸೋಹಮಠದ ಶಿವಕುಮಾರ್ ಸ್ವಾಮೀಜಿ,ಗುಳೇದಗುಡ್ಡ ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯರು, ಕಮತಗಿ ಕೋಟೆಕಲ್ ಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಸ್ವಾಮೀಜಿ, ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು,ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಮಹಾಮಂಡಳದ ನಿರ್ದೇಶ ರಾಮನಗೌಡ ಪಾಟೀಲ ಯತ್ನಾಳ ಇದ್ದರು. ಕಾರ್ಯಕ್ರಮದ ರೂವಾರಿ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸ್ವಾಗತಿಸಿದರು.ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಪಾಟೀಲ ಕೂಚಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.ಕುಂಟೋಜಿ ಚೆನ್ನವೀರ ಶಿವಾಚಾರ್ಯರು ಹಾಗೂ ಶಿಕ್ಷಕಿ ಹೇಮಾ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಅಕ್ಕಮಹಾದೇವಿ ವಚನಗಾಯನವನ್ನು ಸಾಧನಾ ಮಹಿಳಾ ಒಕ್ಕೂಟ,ಯಶಸ್ವಿನಿ ಮಹಿಳಾ ಸಂಘದ ಸದಸ್ಯರು ವಚನ ವಂದನೆ ಕಾರ್ಯಕ್ರಮ ನಡೆಸಿಕೊಟ್ಟರು.


ಹಲವು ವಿಶೇಷತೆಗಳಿಗೆ ಸಾಕ್ಷಿಯಾದ ಕಾರ್ಯಕ್ರಮ;
ವಿಶ್ವ ದಾಸೋಹ ದಿನಾಚರಣೆಯ ಅಂಗವಾಗಿ ಎಸ್.ಎಸ್.ಎಲ್.ಸಿ,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನದೊಂದಿಗೆ ಗೌರವಿಸಲಾಯಿತು.ಪೌರಕಾರ್ಮಿಕರು,ಹಿರಿಯರಿಗೆ ಸನ್ಮಾನ ಮಾಡಲಾಯಿತು.ಇದಕ್ಕೂ ಮುನ್ನ ಹಾನಗಲ್ಲ ಕುಮಾರ ಸ್ವಾಮಿಗಳು, ಲಿಂ.ಶಿವಕುಮಾರ ಸ್ವಾಮೀಜಿ,ವಿಜಯಪುರದ ಸಿದ್ಧೇಶ್ವರ ಸ್ವಾಮೀಜಿ,ಚೆನ್ನಣ್ಣ ದೇಸಾಯಿ ಅವರ ಭಾವಚಿತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ ಪಾದಪೂಜೆ,ಪಾದುಕೆ,ಬೆತ್ತ,ಕೊಡೆ,ವಸ್ತç,ಕಲ್ಲುಸಕ್ಕರೆ,ಉತ್ತತ್ತಿ,ಗುರುಕಾಣಿಕೆ ಸಮರ್ಪಿಸಲಾಯಿತು.ಮದ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸುವ ಮೂಲಕ ವಿಶ್ವ ದಾಸೋಹ ದಿನದ ಕಾರ್ಯಕ್ರಮ ಪ್ರಭುಗೌಡ ದೇಸಾಯಿ ನೇತೃತ್ವದಲ್ಲಿ ಹತ್ತು ಹಲವು ವಿಶೇಷ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

Latest News

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಣಿತದಲ್ಲಿ 54,ಬಯೋಲಜಿ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ