Soon installation of Rayanna's idol in Muddebihala: M.N.Madari

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು.

ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಂಟೋಜಿ, ಕವಡಿಮಟ್ಟಿ ಗ್ರಾಮಗಳಲ್ಲಿ ರಾಯಣ್ಣನ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ. ಆದರೆ, ಮುದ್ದೇಬಿಹಾಳ ನಗರದಲ್ಲಿ ಆದಷ್ಟು ಶೀಘ್ರ ಮೂರ್ತಿ ಅನಾವರಣ ಕಾರ್ಯಕ್ರಮ ಎಲ್ಲ ಸಮಾಜದ ಸಹಕಾರದೊಂದಿಗೆ ದೊಡ್ಡಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರೂರು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಮಾತನಾಡಿ, ಶೌರ್ಯ ಸಾಹಸ, ತ್ಯಾಗಕ್ಕೆ ಹೆಸರಾದ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಡೊಳ್ಳು ಬಡಿದು ಕುಣಿದು ಕುಪ್ಪಳಿಸುವ ಬದಲು ಹಾಲುಮತ ಜಾಗೃತಿ ಹೊಂದಬೇಕಾಗಿದೆ. ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಎಂ.ಜಿ.ಎಂ.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ಮಾತನಾಡಿ, ಸಂಗೊಳ್ಳಿ ರಾಯಣ್ಣನವರ ತ್ಯಾಗ, ಬಲಿದಾನದ ಆದರ್ಶಗಳು ಯುವಕರಲ್ಲಿ ಬರಬೇಕು. ಬೇರೊಂದು ಸಮಾಜದ ಮಹಿಳೆಯನ್ನು ತನ್ನ ತಾಯಿ ಎಂದು ಒಪ್ಪಿಕೊಂಡು ಅವರ ಜೀವ ಕಾಪಾಡಿದ ಹೋರಾಟಗಾರ ರಾಯಣ್ಣ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸರೂರ ಹಾಲುಮತ ಗುರುಪೀಠದ ಶಿವಕುಮಾರ ಸ್ವಾಮೀಜಿ, ವಿದ್ಯಾವರಣ್ಯಯೋಗೇಶ್ವರ ಆಶ್ರಮದ ಮುರುಳೀಧರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡರಾದ ರುದ್ರಯ್ಯ ಮಠ, ಸಂಗನಗೌಡ ಪಾಟೀಲ, ರವಿ ಜಗಲಿ, ಬಿ.ಬಿ.ಚಿಗರಿ, ಎಸ್.ಎನ್.ಕಂಬಳಿ, ಎಂ.ಎಂ.ನಾಟೇಕರ, ಬಿ.ಎಸ್.ಹೂಗಾರ, ಶ್ರೀಶೈಲ ಸಜ್ಜನ, ಸೋಮಲಿಂಗಪ್ಪ ಹೊಸಮನಿ, ಬಸವರಾಜ ಹುಲಗಣ್ಣಿ, ಬಸವರಾಜ ಬಡಿಗೇರ, ಕಾಳಿದಾಸ ಜಟಗುಣಿ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ಮುದ್ದೇಬಿಹಾಳ ಪಟ್ಟಣದಿಂದ ಕುಂಟೋಜಿಯವರೆಗೆ ಅದ್ದೂರಿಯಾಗಿ ರಾಯಣ್ಣನವರ ಮೂರ್ತಿ ಮೆರವಣಿಗೆ ನಡೆಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ