Soon installation of Rayanna's idol in Muddebihala: M.N.Madari

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು.

ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಂಟೋಜಿ, ಕವಡಿಮಟ್ಟಿ ಗ್ರಾಮಗಳಲ್ಲಿ ರಾಯಣ್ಣನ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ. ಆದರೆ, ಮುದ್ದೇಬಿಹಾಳ ನಗರದಲ್ಲಿ ಆದಷ್ಟು ಶೀಘ್ರ ಮೂರ್ತಿ ಅನಾವರಣ ಕಾರ್ಯಕ್ರಮ ಎಲ್ಲ ಸಮಾಜದ ಸಹಕಾರದೊಂದಿಗೆ ದೊಡ್ಡಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರೂರು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಮಾತನಾಡಿ, ಶೌರ್ಯ ಸಾಹಸ, ತ್ಯಾಗಕ್ಕೆ ಹೆಸರಾದ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಡೊಳ್ಳು ಬಡಿದು ಕುಣಿದು ಕುಪ್ಪಳಿಸುವ ಬದಲು ಹಾಲುಮತ ಜಾಗೃತಿ ಹೊಂದಬೇಕಾಗಿದೆ. ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಎಂ.ಜಿ.ಎಂ.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ಮಾತನಾಡಿ, ಸಂಗೊಳ್ಳಿ ರಾಯಣ್ಣನವರ ತ್ಯಾಗ, ಬಲಿದಾನದ ಆದರ್ಶಗಳು ಯುವಕರಲ್ಲಿ ಬರಬೇಕು. ಬೇರೊಂದು ಸಮಾಜದ ಮಹಿಳೆಯನ್ನು ತನ್ನ ತಾಯಿ ಎಂದು ಒಪ್ಪಿಕೊಂಡು ಅವರ ಜೀವ ಕಾಪಾಡಿದ ಹೋರಾಟಗಾರ ರಾಯಣ್ಣ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸರೂರ ಹಾಲುಮತ ಗುರುಪೀಠದ ಶಿವಕುಮಾರ ಸ್ವಾಮೀಜಿ, ವಿದ್ಯಾವರಣ್ಯಯೋಗೇಶ್ವರ ಆಶ್ರಮದ ಮುರುಳೀಧರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡರಾದ ರುದ್ರಯ್ಯ ಮಠ, ಸಂಗನಗೌಡ ಪಾಟೀಲ, ರವಿ ಜಗಲಿ, ಬಿ.ಬಿ.ಚಿಗರಿ, ಎಸ್.ಎನ್.ಕಂಬಳಿ, ಎಂ.ಎಂ.ನಾಟೇಕರ, ಬಿ.ಎಸ್.ಹೂಗಾರ, ಶ್ರೀಶೈಲ ಸಜ್ಜನ, ಸೋಮಲಿಂಗಪ್ಪ ಹೊಸಮನಿ, ಬಸವರಾಜ ಹುಲಗಣ್ಣಿ, ಬಸವರಾಜ ಬಡಿಗೇರ, ಕಾಳಿದಾಸ ಜಟಗುಣಿ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ಮುದ್ದೇಬಿಹಾಳ ಪಟ್ಟಣದಿಂದ ಕುಂಟೋಜಿಯವರೆಗೆ ಅದ್ದೂರಿಯಾಗಿ ರಾಯಣ್ಣನವರ ಮೂರ್ತಿ ಮೆರವಣಿಗೆ ನಡೆಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ