Soon installation of Rayanna's idol in Muddebihala: M.N.Madari

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳದಲ್ಲಿ ಶೀಘ್ರ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ : ಎಂ.ಎನ್.ಮದರಿ

ಮುದ್ದೇಬಿಹಾಳ : ಕೊಲ್ಹಾಪೂರದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಮೂರ್ತಿ ಸಿದ್ಧವಾಗಿದ್ದು ಎರಡ್ಮೂರು ದಿನಗಳಲ್ಲಿ ಮುದ್ದೇಬಿಹಾಳಕ್ಕೆ ಕರೆತರುವ ಕೆಲಸ ಮಾಡುತ್ತೇವೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಎನ್. ಮದರಿ ಹೇಳಿದರು.

ತಾಲ್ಲೂಕು ಕುಂಟೋಜಿಯ ಪರಮಹಂಸ ವಿದ್ಯಾವರಣ್ಯ ಆಶ್ರಮದ ಆವರಣದಲ್ಲಿ ಶುಕ್ರವಾರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುಂಟೋಜಿ, ಕವಡಿಮಟ್ಟಿ ಗ್ರಾಮಗಳಲ್ಲಿ ರಾಯಣ್ಣನ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ. ಆದರೆ, ಮುದ್ದೇಬಿಹಾಳ ನಗರದಲ್ಲಿ ಆದಷ್ಟು ಶೀಘ್ರ ಮೂರ್ತಿ ಅನಾವರಣ ಕಾರ್ಯಕ್ರಮ ಎಲ್ಲ ಸಮಾಜದ ಸಹಕಾರದೊಂದಿಗೆ ದೊಡ್ಡಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸರೂರು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಮಾತನಾಡಿ, ಶೌರ್ಯ ಸಾಹಸ, ತ್ಯಾಗಕ್ಕೆ ಹೆಸರಾದ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಡೊಳ್ಳು ಬಡಿದು ಕುಣಿದು ಕುಪ್ಪಳಿಸುವ ಬದಲು ಹಾಲುಮತ ಜಾಗೃತಿ ಹೊಂದಬೇಕಾಗಿದೆ. ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಎಂ.ಜಿ.ಎಂ.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ಮಾತನಾಡಿ, ಸಂಗೊಳ್ಳಿ ರಾಯಣ್ಣನವರ ತ್ಯಾಗ, ಬಲಿದಾನದ ಆದರ್ಶಗಳು ಯುವಕರಲ್ಲಿ ಬರಬೇಕು. ಬೇರೊಂದು ಸಮಾಜದ ಮಹಿಳೆಯನ್ನು ತನ್ನ ತಾಯಿ ಎಂದು ಒಪ್ಪಿಕೊಂಡು ಅವರ ಜೀವ ಕಾಪಾಡಿದ ಹೋರಾಟಗಾರ ರಾಯಣ್ಣ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸರೂರ ಹಾಲುಮತ ಗುರುಪೀಠದ ಶಿವಕುಮಾರ ಸ್ವಾಮೀಜಿ, ವಿದ್ಯಾವರಣ್ಯಯೋಗೇಶ್ವರ ಆಶ್ರಮದ ಮುರುಳೀಧರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡರಾದ ರುದ್ರಯ್ಯ ಮಠ, ಸಂಗನಗೌಡ ಪಾಟೀಲ, ರವಿ ಜಗಲಿ, ಬಿ.ಬಿ.ಚಿಗರಿ, ಎಸ್.ಎನ್.ಕಂಬಳಿ, ಎಂ.ಎಂ.ನಾಟೇಕರ, ಬಿ.ಎಸ್.ಹೂಗಾರ, ಶ್ರೀಶೈಲ ಸಜ್ಜನ, ಸೋಮಲಿಂಗಪ್ಪ ಹೊಸಮನಿ, ಬಸವರಾಜ ಹುಲಗಣ್ಣಿ, ಬಸವರಾಜ ಬಡಿಗೇರ, ಕಾಳಿದಾಸ ಜಟಗುಣಿ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ಮುದ್ದೇಬಿಹಾಳ ಪಟ್ಟಣದಿಂದ ಕುಂಟೋಜಿಯವರೆಗೆ ಅದ್ದೂರಿಯಾಗಿ ರಾಯಣ್ಣನವರ ಮೂರ್ತಿ ಮೆರವಣಿಗೆ ನಡೆಸಲಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ