Sow the seeds of patriotism in children's minds: Ashoka Mani

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು ಹಾಗೂ ಪಾಲಕರದಾಗಿದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ನುಡಿದರು.

ಅವರು ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು, ಧ್ವಜಾರೋಹಣ ನರೆವೇರಿಸಿ ಮಾತನಾಡಿದರು.

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಬೇಡಿ ಪುಸ್ತಕ ಕೊಡಿ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರ ಬದುಕು ಬರಹ ಕುರಿತು ಬೆಳಕು ಚೆಲ್ಲುವ ವಿಷಯಗಳನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿ, ಮಕ್ಕಳಲ್ಲಿ ರಾಷ್ಟ್ರಪ್ರೇಮ ಜಾಗ್ರತವಾಗುವಂತೆ‌ ಸರಕಾರ ಹಾಗೂ ಶಿಕ್ಷಣ ಇಲಾಖೆ ಮಾಡಬೇಕು.

ನಮ್ಮ ದೇಶ ಶೈಕ್ಷಣಿಕ, ವೈಜ್ಞಾನಿಕ,ಆರ್ಥಿಕವಾಗಿ, ಹಾಗೂ ಸೈನಿಕ ರಂಗದಲ್ಲಿ ಬಲಿಷ್ಠವಾಗಿ ಮುನ್ನಡೆದಿದೆ. ಇದು ಕೆಲವೊಂದು ರಾಷ್ಟ್ರಗಳಿಗೆ ಸಹಿಸಲಾಗುತ್ತಿಲ್ಲ. ಜಾತಿಯ ವಿಷ ಬೀಜ ಬಿತ್ತಿ, ನಮ್ಮ ಒಕ್ಕಟ್ಟನ್ನು ಒಡೆಯಲು ನಿರಂತರ ಹುನ್ನಾರ ನಡೆಸುತ್ತಿವೆ. ಹೇಗಾದರೂ ಮಾಡಿ ಭಾರತದ ಕಾಲೆಳೆಯಲು ಆ ಕುತಂತ್ರಿ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಇವೆ. ಆದರೆ, ಭಾರತ ಆ ರಾಷ್ಟ್ರಗಳಿಗೆ ಬಗ್ಗುತ್ತಿಲ್ಲ.ಜಗ್ಗುತ್ತಿಲ್ಲ ಹಾಗೂ ಕುಗ್ಗುತ್ತಿಲ್ಲ. ದಿಟ್ಟ ಉತ್ತರವನ್ನು ಕೊಡುತ್ತಲೇ ಮುನ್ನೆಡೆದಿದೆ. ಭಾರತೀಯರಾದ ನಾವು ಜಾತಿ ಮತ ಪಂಥವೆಂಬ ಬೇಧ ಭಾವ ಎನಿಸದೇ ಒಂದಾಗಿ ಸದೃಢ ಭಾರತ ಕಟ್ಟಲು ಪಣತೊಡೋಣ ಎಂದು ಅವರು ನುಡಿದರು.

ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನ ಅಧ್ಯಕ್ಷೆ ಬಸಮ್ಮ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಪ್ರತಿಯೊಬ್ಬ ತಂದೆ ತಾಯಂದಿರ ಕರ್ತವ್ಯ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ನಿರ್ಲಕ್ಷ ವಹಿಸುವುದು ಸಲ್ಲದು ಎಂದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಸಿದರಡ್ಡಿ ಮಾತನಾಡಿ, ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದರು.

ಮುಖ್ಯ ಅತಿಥಿಗಳಾಗಿ ಉದ್ದಿಮೆದಾರ ಸಂಜಯ ಓಸ್ವಾಲ ಆಗಮಿಸಿದ್ದರು. ಅತಿಥಿಗಳಾಗಿ ಹಿರಿಯ ಪತ್ರಕರ್ತ ಶಂಕರ ಹೆಬ್ಬಾಳ, ಮಾಜಿ ಸೈನಿಕ ಗೌಡಪ್ಪ ಚವನಭಾವಿ ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಹಾಗೂ ಶಿಕ್ಷಕ ಸಿಬ್ಬಂದಿ ಪಾಲ್ಗೊಂಡಿದ್ದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರದ ಜನರ ಗಮನ ಸೆಳೆದವು. ದಂಡಮ್ಮ ಮಡಿವಾಳರ ಶಿಕ್ಷಕಿಯರು ಸ್ವಾಗತಿಸಿದರು. ಅರ್ಶಿಯಾ ಸಂಕನಾಳ ಶಿಕ್ಷಕಿಯರು ವಂದಿಸಿದರು.ಶೈಲಜಾ ಪಾಟೀಲ್ ಶಿಕ್ಷಕಿಯರು ಕಾರ್ಯಕ್ರಮ ನಿರೂಪಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ