SP visit to District Judge's house: Rs 30.14 lakh. Theft of valuable jewellery, cash

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ ಒಟ್ಟು 30.14 ಲಕ್ಷ ರೂ.ಕಳ್ಳತನ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಟ್ಟಣದ ಹುಡ್ಕೋದಲ್ಲಿರುವ ಜಿಲ್ಲಾ ನ್ಯಾಯಾಧೀಶರ ಮನೆಗೆ ಸೋಮವಾರ ಭೇಟಿ ನೀಡಿದ್ದ ಅವರು ಘಟನೆಯ ಕುರಿತು ನ್ಯಾಯಾಧೀಶರಿಂದ ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನೆಯ ಬಾಗಿಲು ಮುರಿಯದೇ ಕೀ ಬಳಸಿ ಬಾಗಿಲು ತೆರೆದಿದ್ದು ಅಂದಾಜು 29.60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಡೈಮಂಡ ಆಭರಣ, 4500 ರೂ.ಬೆಳ್ಳಿ ಗೆಜ್ಜೆ, 50 ಸಾವಿರ ರೂ. ನಗದು ಹಣ ಕಳ್ಳತನ ಮಾಡಿದ್ದಾರೆ ಎಂದು ನ್ಯಾಯಾಧೀಶರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯ ಕುರಿತು ಸಿಪಿಐ ಮೊಹ್ಮದ್ ಫಸಿಯುದ್ದೀನ್ ನೇತೃತ್ವ ಪಿಎಸ್‌ಐ ಸಂಜಯ ತಿಪರೆಡ್ಡಿ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಕಳ್ಳರನ್ನು ಪತ್ತೆ ಮಾಡುವುದಾಗಿ ತಿಳಿಸಿದರು. ಕಳ್ಳತನವನ್ನು ಪರಿಚಿತರಿಂದಲೇ ಆಗಿರುವ ಶಂಕೆ ಇದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್, ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ. ಪ್ರಸ್ತಾವನೆ: ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುದ್ದೇಬಿಹಾಳ ಪಟ್ಟಣದ ಆಯಕಟ್ಟಿನ ಜಾಗೆಯಲ್ಲಿ ಟ್ರಾಫಿಕ್ ಸಿಗ್ನಲ್ ಆರಂಭಿಸಲು ಹಾಗೂ ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆಗೆ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಈಗಿರುವ ಕ್ಯಾಮೆರಾಗಳಲ್ಲಿ ಹಗಲು ಹೊತ್ತಿನಲ್ಲಿ ವಾಹನಗಳ ನಂಬರ್ ಗುರುತು ಸಿಗುವುದಿಲ್ಲ. ಆದ್ದರಿಂದ ಟ್ರಾಫಿಕ್ ಸಿಗ್ನಲ್, ಜನರ ಮುಖಚರ್ಯೆ ಗುರುತಿಸುವ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇಲ್ಲಿನ ಶಾಸಕರು ಶಾಸಕರ ವಿಶೇಷ ನಿಧಿಯಡಿ ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿನ ಹುಡ್ಕೋದಲ್ಲಿ 50 ಲಕ್ಷ ರೂ. ಕೆಳಗಡೆ ಮನೆಗಳಿಲ್ಲ. ಆದರೆ, 10 ಸಾವಿರ ಖರ್ಚು ಮಾಡಿ ಸಿಸಿಟಿವಿ ಹಾಕುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಾರೆ. ಜನಸ್ನೇಹಿ ಪೊಲೀಸ ಎಂದರೆ ನಾಗರಿಕರು ಇಂತಹ ಸಹಕಾರವನ್ನು ಪೊಲೀಸರಿಗೆ ಮಾಡಬೇಕು. ಇಂತಹ ಘಟನೆಗಳು ನಡೆದಾಗ ಕಳ್ಳರನ್ನು ಗುರುತು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಒಬ್ಬರಿಗೆ ಕಷ್ಟವಾದರೆ 10-20 ಮನೆಗಳ ಮಾಲೀಕರು ಸೇರಿಕೊಂಡು ಸಿಸಿಟಿವಿ ಅಳವಡಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮೊಹ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ,ಅಪರಾಧ ವಿಭಾಗದ ಪಿಎಸೈ ಆರ್.ಎಲ್.ಮನ್ನಾಭಾಯ ಇದ್ದರು.

ಟ್ರಾಫಿಕ್ ಸಿಗ್ನಲ್,ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ -ಶಾಸಕ ನಾಡಗೌಡ : ಅಪರಾಧ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಿಸಿಟಿವಿ, ಟ್ರಾಫಿಕ್ ಸಿಗ್ನಲ್ ಅಳವಡಿಸಲು ಶಾಸಕರ ವಿಶೇಷ ಅನುದಾನದಡಿ ಪೊಲೀಸ್ ಇಲಾಖೆಗೆ ಒಂದು ಕೋಟಿ ರೂ.ಅನುದಾನ ನೀಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ನ್ಯಾಯಾಧೀಶರ ಮನೆ ಕಳ್ಳತನ ಕುರಿತು ನನ್ನೊಂದಿಗೆ ಪೊಲೀಸರು ಚರ್ಚೆ ನಡೆಸಿಲ್ಲ. ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವಂತೆ ತಿಳಿಸಿದ್ದಾಗಿ ಶಾಸಕರು ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು