SP visit to District Judge's house: Rs 30.14 lakh. Theft of valuable jewellery, cash

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ ಒಟ್ಟು 30.14 ಲಕ್ಷ ರೂ.ಕಳ್ಳತನ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಟ್ಟಣದ ಹುಡ್ಕೋದಲ್ಲಿರುವ ಜಿಲ್ಲಾ ನ್ಯಾಯಾಧೀಶರ ಮನೆಗೆ ಸೋಮವಾರ ಭೇಟಿ ನೀಡಿದ್ದ ಅವರು ಘಟನೆಯ ಕುರಿತು ನ್ಯಾಯಾಧೀಶರಿಂದ ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನೆಯ ಬಾಗಿಲು ಮುರಿಯದೇ ಕೀ ಬಳಸಿ ಬಾಗಿಲು ತೆರೆದಿದ್ದು ಅಂದಾಜು 29.60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಡೈಮಂಡ ಆಭರಣ, 4500 ರೂ.ಬೆಳ್ಳಿ ಗೆಜ್ಜೆ, 50 ಸಾವಿರ ರೂ. ನಗದು ಹಣ ಕಳ್ಳತನ ಮಾಡಿದ್ದಾರೆ ಎಂದು ನ್ಯಾಯಾಧೀಶರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯ ಕುರಿತು ಸಿಪಿಐ ಮೊಹ್ಮದ್ ಫಸಿಯುದ್ದೀನ್ ನೇತೃತ್ವ ಪಿಎಸ್‌ಐ ಸಂಜಯ ತಿಪರೆಡ್ಡಿ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಕಳ್ಳರನ್ನು ಪತ್ತೆ ಮಾಡುವುದಾಗಿ ತಿಳಿಸಿದರು. ಕಳ್ಳತನವನ್ನು ಪರಿಚಿತರಿಂದಲೇ ಆಗಿರುವ ಶಂಕೆ ಇದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್, ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ. ಪ್ರಸ್ತಾವನೆ: ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುದ್ದೇಬಿಹಾಳ ಪಟ್ಟಣದ ಆಯಕಟ್ಟಿನ ಜಾಗೆಯಲ್ಲಿ ಟ್ರಾಫಿಕ್ ಸಿಗ್ನಲ್ ಆರಂಭಿಸಲು ಹಾಗೂ ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆಗೆ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಈಗಿರುವ ಕ್ಯಾಮೆರಾಗಳಲ್ಲಿ ಹಗಲು ಹೊತ್ತಿನಲ್ಲಿ ವಾಹನಗಳ ನಂಬರ್ ಗುರುತು ಸಿಗುವುದಿಲ್ಲ. ಆದ್ದರಿಂದ ಟ್ರಾಫಿಕ್ ಸಿಗ್ನಲ್, ಜನರ ಮುಖಚರ್ಯೆ ಗುರುತಿಸುವ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇಲ್ಲಿನ ಶಾಸಕರು ಶಾಸಕರ ವಿಶೇಷ ನಿಧಿಯಡಿ ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿನ ಹುಡ್ಕೋದಲ್ಲಿ 50 ಲಕ್ಷ ರೂ. ಕೆಳಗಡೆ ಮನೆಗಳಿಲ್ಲ. ಆದರೆ, 10 ಸಾವಿರ ಖರ್ಚು ಮಾಡಿ ಸಿಸಿಟಿವಿ ಹಾಕುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಾರೆ. ಜನಸ್ನೇಹಿ ಪೊಲೀಸ ಎಂದರೆ ನಾಗರಿಕರು ಇಂತಹ ಸಹಕಾರವನ್ನು ಪೊಲೀಸರಿಗೆ ಮಾಡಬೇಕು. ಇಂತಹ ಘಟನೆಗಳು ನಡೆದಾಗ ಕಳ್ಳರನ್ನು ಗುರುತು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಒಬ್ಬರಿಗೆ ಕಷ್ಟವಾದರೆ 10-20 ಮನೆಗಳ ಮಾಲೀಕರು ಸೇರಿಕೊಂಡು ಸಿಸಿಟಿವಿ ಅಳವಡಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮೊಹ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ,ಅಪರಾಧ ವಿಭಾಗದ ಪಿಎಸೈ ಆರ್.ಎಲ್.ಮನ್ನಾಭಾಯ ಇದ್ದರು.

ಟ್ರಾಫಿಕ್ ಸಿಗ್ನಲ್,ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ -ಶಾಸಕ ನಾಡಗೌಡ : ಅಪರಾಧ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಿಸಿಟಿವಿ, ಟ್ರಾಫಿಕ್ ಸಿಗ್ನಲ್ ಅಳವಡಿಸಲು ಶಾಸಕರ ವಿಶೇಷ ಅನುದಾನದಡಿ ಪೊಲೀಸ್ ಇಲಾಖೆಗೆ ಒಂದು ಕೋಟಿ ರೂ.ಅನುದಾನ ನೀಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ನ್ಯಾಯಾಧೀಶರ ಮನೆ ಕಳ್ಳತನ ಕುರಿತು ನನ್ನೊಂದಿಗೆ ಪೊಲೀಸರು ಚರ್ಚೆ ನಡೆಸಿಲ್ಲ. ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವಂತೆ ತಿಳಿಸಿದ್ದಾಗಿ ಶಾಸಕರು ಹೇಳಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ