SP visit to District Judge's house: Rs 30.14 lakh. Theft of valuable jewellery, cash

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ ಒಟ್ಟು 30.14 ಲಕ್ಷ ರೂ.ಕಳ್ಳತನ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಟ್ಟಣದ ಹುಡ್ಕೋದಲ್ಲಿರುವ ಜಿಲ್ಲಾ ನ್ಯಾಯಾಧೀಶರ ಮನೆಗೆ ಸೋಮವಾರ ಭೇಟಿ ನೀಡಿದ್ದ ಅವರು ಘಟನೆಯ ಕುರಿತು ನ್ಯಾಯಾಧೀಶರಿಂದ ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನೆಯ ಬಾಗಿಲು ಮುರಿಯದೇ ಕೀ ಬಳಸಿ ಬಾಗಿಲು ತೆರೆದಿದ್ದು ಅಂದಾಜು 29.60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಡೈಮಂಡ ಆಭರಣ, 4500 ರೂ.ಬೆಳ್ಳಿ ಗೆಜ್ಜೆ, 50 ಸಾವಿರ ರೂ. ನಗದು ಹಣ ಕಳ್ಳತನ ಮಾಡಿದ್ದಾರೆ ಎಂದು ನ್ಯಾಯಾಧೀಶರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯ ಕುರಿತು ಸಿಪಿಐ ಮೊಹ್ಮದ್ ಫಸಿಯುದ್ದೀನ್ ನೇತೃತ್ವ ಪಿಎಸ್‌ಐ ಸಂಜಯ ತಿಪರೆಡ್ಡಿ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಕಳ್ಳರನ್ನು ಪತ್ತೆ ಮಾಡುವುದಾಗಿ ತಿಳಿಸಿದರು. ಕಳ್ಳತನವನ್ನು ಪರಿಚಿತರಿಂದಲೇ ಆಗಿರುವ ಶಂಕೆ ಇದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್, ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ. ಪ್ರಸ್ತಾವನೆ: ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುದ್ದೇಬಿಹಾಳ ಪಟ್ಟಣದ ಆಯಕಟ್ಟಿನ ಜಾಗೆಯಲ್ಲಿ ಟ್ರಾಫಿಕ್ ಸಿಗ್ನಲ್ ಆರಂಭಿಸಲು ಹಾಗೂ ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆಗೆ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಈಗಿರುವ ಕ್ಯಾಮೆರಾಗಳಲ್ಲಿ ಹಗಲು ಹೊತ್ತಿನಲ್ಲಿ ವಾಹನಗಳ ನಂಬರ್ ಗುರುತು ಸಿಗುವುದಿಲ್ಲ. ಆದ್ದರಿಂದ ಟ್ರಾಫಿಕ್ ಸಿಗ್ನಲ್, ಜನರ ಮುಖಚರ್ಯೆ ಗುರುತಿಸುವ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇಲ್ಲಿನ ಶಾಸಕರು ಶಾಸಕರ ವಿಶೇಷ ನಿಧಿಯಡಿ ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿನ ಹುಡ್ಕೋದಲ್ಲಿ 50 ಲಕ್ಷ ರೂ. ಕೆಳಗಡೆ ಮನೆಗಳಿಲ್ಲ. ಆದರೆ, 10 ಸಾವಿರ ಖರ್ಚು ಮಾಡಿ ಸಿಸಿಟಿವಿ ಹಾಕುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಾರೆ. ಜನಸ್ನೇಹಿ ಪೊಲೀಸ ಎಂದರೆ ನಾಗರಿಕರು ಇಂತಹ ಸಹಕಾರವನ್ನು ಪೊಲೀಸರಿಗೆ ಮಾಡಬೇಕು. ಇಂತಹ ಘಟನೆಗಳು ನಡೆದಾಗ ಕಳ್ಳರನ್ನು ಗುರುತು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಒಬ್ಬರಿಗೆ ಕಷ್ಟವಾದರೆ 10-20 ಮನೆಗಳ ಮಾಲೀಕರು ಸೇರಿಕೊಂಡು ಸಿಸಿಟಿವಿ ಅಳವಡಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮೊಹ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ,ಅಪರಾಧ ವಿಭಾಗದ ಪಿಎಸೈ ಆರ್.ಎಲ್.ಮನ್ನಾಭಾಯ ಇದ್ದರು.

ಟ್ರಾಫಿಕ್ ಸಿಗ್ನಲ್,ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ -ಶಾಸಕ ನಾಡಗೌಡ : ಅಪರಾಧ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಿಸಿಟಿವಿ, ಟ್ರಾಫಿಕ್ ಸಿಗ್ನಲ್ ಅಳವಡಿಸಲು ಶಾಸಕರ ವಿಶೇಷ ಅನುದಾನದಡಿ ಪೊಲೀಸ್ ಇಲಾಖೆಗೆ ಒಂದು ಕೋಟಿ ರೂ.ಅನುದಾನ ನೀಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ನ್ಯಾಯಾಧೀಶರ ಮನೆ ಕಳ್ಳತನ ಕುರಿತು ನನ್ನೊಂದಿಗೆ ಪೊಲೀಸರು ಚರ್ಚೆ ನಡೆಸಿಲ್ಲ. ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವಂತೆ ತಿಳಿಸಿದ್ದಾಗಿ ಶಾಸಕರು ಹೇಳಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ