SP visit to District Judge's house: Rs 30.14 lakh. Theft of valuable jewellery, cash

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಜಿಲ್ಲಾ ನ್ಯಾಯಾಧೀಶರ ಮನೆಗೆ ಎಸ್ಪಿ ಭೇಟಿ30.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋದ 14 ನೇ ಕ್ರಾಸ್ ನಲ್ಲಿರುವ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ ಕೌಶಿಕ್ ಅವರ ಬಾಡಿಗೆ ಇದ್ದ ಮನೆಯಲ್ಲಿ ಕಳ್ಳರು ಭಾನುವಾರ ಹಾಗೂ ಸೋಮವಾರದ ಮಧ್ಯೆದ ವೇಳೆಯಲ್ಲಿ ಕಳ್ಳತನ ಮಾಡಿದ್ದು ಚಿನ್ನ,ಬೆಳ್ಳಿ ಆಭರಣ ಹಾಗೂ ಡೈಮಂಡ್ ಮತ್ತು ನಗದು ಸೇರಿ ಒಟ್ಟು 30.14 ಲಕ್ಷ ರೂ.ಕಳ್ಳತನ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಪಟ್ಟಣದ ಹುಡ್ಕೋದಲ್ಲಿರುವ ಜಿಲ್ಲಾ ನ್ಯಾಯಾಧೀಶರ ಮನೆಗೆ ಸೋಮವಾರ ಭೇಟಿ ನೀಡಿದ್ದ ಅವರು ಘಟನೆಯ ಕುರಿತು ನ್ಯಾಯಾಧೀಶರಿಂದ ಮಾಹಿತಿ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನೆಯ ಬಾಗಿಲು ಮುರಿಯದೇ ಕೀ ಬಳಸಿ ಬಾಗಿಲು ತೆರೆದಿದ್ದು ಅಂದಾಜು 29.60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಡೈಮಂಡ ಆಭರಣ, 4500 ರೂ.ಬೆಳ್ಳಿ ಗೆಜ್ಜೆ, 50 ಸಾವಿರ ರೂ. ನಗದು ಹಣ ಕಳ್ಳತನ ಮಾಡಿದ್ದಾರೆ ಎಂದು ನ್ಯಾಯಾಧೀಶರು ದೂರು ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯ ಕುರಿತು ಸಿಪಿಐ ಮೊಹ್ಮದ್ ಫಸಿಯುದ್ದೀನ್ ನೇತೃತ್ವ ಪಿಎಸ್‌ಐ ಸಂಜಯ ತಿಪರೆಡ್ಡಿ ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಕಳ್ಳರನ್ನು ಪತ್ತೆ ಮಾಡುವುದಾಗಿ ತಿಳಿಸಿದರು. ಕಳ್ಳತನವನ್ನು ಪರಿಚಿತರಿಂದಲೇ ಆಗಿರುವ ಶಂಕೆ ಇದ್ದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್, ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ. ಪ್ರಸ್ತಾವನೆ: ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುದ್ದೇಬಿಹಾಳ ಪಟ್ಟಣದ ಆಯಕಟ್ಟಿನ ಜಾಗೆಯಲ್ಲಿ ಟ್ರಾಫಿಕ್ ಸಿಗ್ನಲ್ ಆರಂಭಿಸಲು ಹಾಗೂ ಅತ್ಯಾಧುನಿಕ ಕ್ಯಾಮೆರಾ ಅಳವಡಿಕೆಗೆ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಪೊಲೀಸ್ ಇಲಾಖೆಯಿಂದ ಸಲ್ಲಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಈಗಿರುವ ಕ್ಯಾಮೆರಾಗಳಲ್ಲಿ ಹಗಲು ಹೊತ್ತಿನಲ್ಲಿ ವಾಹನಗಳ ನಂಬರ್ ಗುರುತು ಸಿಗುವುದಿಲ್ಲ. ಆದ್ದರಿಂದ ಟ್ರಾಫಿಕ್ ಸಿಗ್ನಲ್, ಜನರ ಮುಖಚರ್ಯೆ ಗುರುತಿಸುವ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಇಲ್ಲಿನ ಶಾಸಕರು ಶಾಸಕರ ವಿಶೇಷ ನಿಧಿಯಡಿ ಅನುದಾನ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿನ ಹುಡ್ಕೋದಲ್ಲಿ 50 ಲಕ್ಷ ರೂ. ಕೆಳಗಡೆ ಮನೆಗಳಿಲ್ಲ. ಆದರೆ, 10 ಸಾವಿರ ಖರ್ಚು ಮಾಡಿ ಸಿಸಿಟಿವಿ ಹಾಕುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಾರೆ. ಜನಸ್ನೇಹಿ ಪೊಲೀಸ ಎಂದರೆ ನಾಗರಿಕರು ಇಂತಹ ಸಹಕಾರವನ್ನು ಪೊಲೀಸರಿಗೆ ಮಾಡಬೇಕು. ಇಂತಹ ಘಟನೆಗಳು ನಡೆದಾಗ ಕಳ್ಳರನ್ನು ಗುರುತು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಒಬ್ಬರಿಗೆ ಕಷ್ಟವಾದರೆ 10-20 ಮನೆಗಳ ಮಾಲೀಕರು ಸೇರಿಕೊಂಡು ಸಿಸಿಟಿವಿ ಅಳವಡಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಎಸ್ಪಿ ತಿಳಿಸಿದರು. ಸಿಪಿಐ ಮೊಹ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ,ಅಪರಾಧ ವಿಭಾಗದ ಪಿಎಸೈ ಆರ್.ಎಲ್.ಮನ್ನಾಭಾಯ ಇದ್ದರು.

ಟ್ರಾಫಿಕ್ ಸಿಗ್ನಲ್,ಕ್ಯಾಮೆರಾ ಅಳವಡಿಕೆಗೆ ಕೋಟಿ ರೂ -ಶಾಸಕ ನಾಡಗೌಡ : ಅಪರಾಧ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸಿಸಿಟಿವಿ, ಟ್ರಾಫಿಕ್ ಸಿಗ್ನಲ್ ಅಳವಡಿಸಲು ಶಾಸಕರ ವಿಶೇಷ ಅನುದಾನದಡಿ ಪೊಲೀಸ್ ಇಲಾಖೆಗೆ ಒಂದು ಕೋಟಿ ರೂ.ಅನುದಾನ ನೀಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ನ್ಯಾಯಾಧೀಶರ ಮನೆ ಕಳ್ಳತನ ಕುರಿತು ನನ್ನೊಂದಿಗೆ ಪೊಲೀಸರು ಚರ್ಚೆ ನಡೆಸಿಲ್ಲ. ಅಪರಾಧಿಗಳನ್ನು ತ್ವರಿತವಾಗಿ ಬಂಧಿಸುವಂತೆ ತಿಳಿಸಿದ್ದಾಗಿ ಶಾಸಕರು ಹೇಳಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು