Sri Siddaganga Educational Institution providing free education to orphans, needy and poor children

ಅನಾಥ ಹಾಗೂ ನಿರ್ಗತಿಕ, ಕಡುಬಡವ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ

ಅನಾಥ ಹಾಗೂ ನಿರ್ಗತಿಕ, ಕಡುಬಡವ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ

Ad
Ad

ಕಲಕೇರಿ: ವಿಧ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವದರ ಜೊತೆಗೆ ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವದು ಮುಖ್ಯವಾಗಿದೆ. ವಿಧ್ಯಾರ್ಥಿಗಳನ್ನು ಕೇವಲ ಅಂಕಗಳಿಕೆಗಾಗಿ ಅವರನ್ನು ತಯಾರು ಮಾಡುವ ಬದಲಾಗಿ ದೇಶದ ಸತ್ಪಜೆಯಾಗಿ ಹೊರಹೊಮ್ಮುವಂತ ನೈತಿಕ ಶಿಕ್ಷಣದ ಅವಶ್ಯಕತೆಯಿದ್ದು ಈ ಕೆಲಸವನ್ನು ತುರಕನಗೇರಿಯ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಈ ಭಾಗದ ಅನಾಥ ಹಾಗೂ ನಿರ್ಗತಿಕ, ಕಡುಬಡವ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವದರ ಮೂಲಕವಾಗಿ ಮಾಡುತ್ತಿದೆ ಎಂದು ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಅವರು ಹೇಳಿದರು.

Ad
Ad

ಕಲಕೇರಿ ಸಮಿಪದ ತುರಕುನಗೇರಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆಯ 7 ನೇ ವರ್ಷದ ವಾರ್ಷಿಕೋತ್ಸವ ಹಾಗೂ ತುಮಕುರಿನ ಸಿದ್ದಗಂಗಾ ಮಠದ ಲಿಂ. ಶ್ರೀ ಶಿವಕುಮಾರ ಸ್ವಾಮಿಜಿಯವರ 118 ನೇ ಜಯಂತ್ಯೋತ್ಸವ ಹಾಗೂ ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ “ಸಿದ್ದಗಂಗಾ ಶ್ರೀ ಕಾಯಕ ರತ್ನ” ಹಾಗೂ “ಸಿದ್ದಗಂಗಾ ಶ್ರೀ ರತ್ನ” ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂಸ್ಥೆಯ ಕಾರ್ಯದರ್ಶಿ ಶಾಮಶುದ್ದಿನ ಇನಾಮದಾರ ಅವರು ಹುಟ್ಟಿನಿಂದ ಇಸ್ಲಾಂ ಧರ್ಮದವರಾದರು ಅವರು ತಮ್ಮ ಬಾಲ್ಯದ ಶಿಕ್ಷಣವನ್ನು ಸಿದ್ದಗಂಗಾ ಮಠದಲ್ಲಿ ಪಡೆದಿರುವ ಹಿನ್ನೆಲೆಯಲ್ಲಿ ಇಗೆ ತುರಕುನಗೇರಿಯಲ್ಲಿ ಸಿದ್ದಗಂಗಾ ಶ್ರೀಗಳ ಹೆಸರಿನಲ್ಲಿ ಅನಾಥನಿರ್ಗತಿಕ. ಕಡುಬಡವ ಮಕ್ಕಳಿಗೆ ಉಚಿತ ಶಿಕ್ಷಣ ನಿಡುತ್ತಿರುವದು ನಿಜಕ್ಕೂ ಶ್ಲಾಘನೀಯವಾಗಿದೆ. ಮುಂದಿನ ದಿನಮಾನಗಳಲ್ಲಿ ಈ ಸಂಸ್ಥೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭಹಾರೈಸಿದರು.

ಗುಂಡಕನಾಳದ ಗುರುಲಿಂಗ ಶಿವಾಚಾರ್ಯರು, ಮಳಖೇಡದ ಅಲ್ಲಾಜ್ ಸೈಯ್ಯದಶಾ ಮುಸ್ತಪಾ ಖಾದ್ರಿ, ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಮಾತನಾಡಿ, ಮಾನವ ಜೀವನ ಅಮೂಲ್ಯವಾದದ್ದು ಧರ್ಮದ ಆದರ್ಶ ಮೌಲ್ಯಗಳನ್ನು ಜೀವನದ ಪರಿಪಾಲನೆಯಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ, ಹುಟ್ಟು ಎಷ್ಟು ಸಹಜವೋ ಸಾವು ನಿಶ್ಚಿತವಾದುದೆಂದು ತಿಳಿದುಕೊಂಡು ಬದುಕಿನಲ್ಲಿ ಒಂದಿಷ್ಟು ಓಳಿತನ್ನು ಮಾಡಲು ಮುಂದಾಗಬೇಕು ಈ ದಿಸೇಯಲ್ಲಿ ತುರಕುನಗೇರಿಯ ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ನಿಜಕ್ಕೂ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಲಿಂಗದಳ್ಳಿ, ದಲಿತ ವಿಧ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಸೇರಿದಂತೆ ಇತರರು ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಶಾಮಶುದ್ದಿನ್ ಇನಾಮದಾರ ಪ್ರಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಿದ್ದಗಂಗಾ ಶ್ರೀ ಕಾಯಕ ರತ್ನ ಹಾಗೂ ಸಿದ್ದಗಂಗಾ ಶ್ರೀ ರತ್ನ ಮತ್ತು ಸಿದ್ದಗಂಗಾ ಶ್ರೀ ಬಾಲಪ್ರತಿಭೆ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಲಲಿತಾ ದೊಡ್ಡಮನಿ. ಸೈಯ್ಯದ್ ಶಕಿಲ ಅಹ್ಮದ ಖಾಜಿ, ಮಾವಿನಭಾವಿಯ ಬಸವರಾಜ್ ದೇವರು, ಬೆಕಿನಾಳದ ಮಹೇಶ ಮುತ್ಯಾ. ಪ್ರಕಾಶ ಪೂಜಾರಿ, ಫಿರಮಮ್ಮದ ಇನಾಮದಾರ, ಅಹ್ಮದಸಾಬ ಜಾಡಗಾರ, ಜಾವೀದ್ ಕರ್ನಾಳ, ಸಿದ್ದು ಬುಳ್ಳಾ, ಕನಕರಾಜ್ ವಡ್ಡ‌ರ್, ಸಿದ್ದನಗೌಡ ಬಿರಾದಾರ, ಹಣಮಂತ ವಡ್ಡರ್, ಸಿಆರ್‌ಪಿ ಎಸ್ ಎಲ್ ನಾಲ್ನೋಡಿ, ಬಾಗ್ಯಶ್ರೀ ಸುದಾಕರ, ಯಮನೂರಿ ಸಿಂದಗಿರಿ, ಜೆ ಬಿ ಕುಲಕರ್ಣಿ, ಡಿ ಎನ್ ಚಿಕ್ಕಮಠ,ಕಾಶಿನಾಥ ತಾಳಿಕೋಟಿ ಸೇರಿದಂತೆ ಇತರರು ಇದ್ದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ