SSLC Exam: Rank for Brilliant School in Myleswar

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ತಾಳಿಕೋಟಿ: ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಗಗನಸಿಂಗ್ ಮೂಲಿಮನಿ ಎಸ್.ಎಸ್.ಎಲ್.ಸಿ.ಪರಿಕ್ಷೆಯಲ್ಲಿ 625ಕ್ಕೆ 621(99.36%) ಅಂಕ ಗಳಿಸುವದರೊಂದಿಗೆ ರಾಜ್ಯಕ್ಕೆ ರ‍್ಯಾಂಕ್ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ.

ಪಟ್ಟಣದ ಪುರಸಭಾ ಸದಸ್ಯ ಜೈಸಿಂಗ್ ಮೂಲಿಮನಿ ಅವರ ಪುತ್ರನಾಗಿರುವ ಗಗನಸಿಂಗ್ ಪ್ರಾಥಮಿಕ ಶಿಕ್ಷಣದಿಂದ ಪ್ರೌಢಶಿಕ್ಷಣದವರೆಗೂ ಬ್ರಿಲಿಯಂಟ್ ಶಾಲೆಯಲ್ಲಿ ಓದಿದ್ದಾನೆ. ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ಕನ್ನಡಕ್ಕೆ 125ಕ್ಕೆ 125 ಅಂಕ, ಸಮಾಜ ವಿಜ್ಞಾನ 100ಕ್ಕೆ 100, ಹಿಂದಿ 100ಕ್ಕೆ 100, ಗಣಿತ 100ಕ್ಕೆ 99, ವಿಜ್ಞಾನ 100ಕ್ಕೆ 99, ಇಂಗ್ಲೀಷ 100ಕ್ಕೆ 98 ಅಂಕಗಳನ್ನು ಗಳಿಸಿದ್ದು ಈ ವಿದ್ಯಾರ್ಥಿಯ ಸಾಧನೆಯಿಂದ ಶಾಲೆಯಲ್ಲಿ ಹಾಗೂ ವಿದ್ಯಾರ್ಥಿಯ ಮನೆಯಲ್ಲಿ ಸಂತಸ ಮನೆ ಮಾಡಿದೆ.

ಬ್ರಿಲಿಯಂಟ್ ಶಿಕ್ಷಣ ಸಂಸ್ಥೆಯ ಚೇರಮನ್ ನಾನಾಗೌಡ ನಡುವಿನಮನಿ ಮಾತನಾಡಿ, ಗಗನಸಿಂಗ್ ಮೂಲಿಮನಿ ಸಾಧನೆಯ ಗುರಿಯೊಂದಿಗೆ ಬೆಳೆದು ಬಂದ ವಿದ್ಯಾರ್ಥಿಯಾಗಿದ್ದಾನೆ. ರಾಜ್ಯಕ್ಕೆ ಪ್ರಥಮ ಸ್ಥಾನದೊಂದಿಗೆ ಗುರಿತಿಸಿಕೊಳ್ಳಬೇಕೆಂಬ ಬಯಕೆ ಅವನದ್ದಾಗಿತ್ತು. ಆದರೆ 4 ಅಂಕ ಕಡಿತಗೊಂಡಿದೆ. ಆದರೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು ಇನ್ನಷ್ಟು ಅಂಕ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ವಿದ್ಯಾರ್ಥಿ ಗಗನಸಿಂಗ ಮೂಲಿಮನಿ ಮಾತನಾಡಿ, ಪ್ರಾಥಮಿಕ ಹಂತದಿಂದಲೂ ಬ್ರಿಲಿಯಂಟ್ ಶಾಲೆಯಲ್ಲಿ ನೀಡಿದ ಭೋದನಾ ಕೌಶಲ್ಯ ಮತ್ತು ಶಿಕ್ಷಕರ ಮಾಡಿದ ಉತ್ತಮ ಭೋದನೆ ಅದರ ಜೊತೆಗೆ ನನ್ನ ತಂದೆ ಜೈಸಿಂಗ್ ಅವರು ಹಿಂದೆ ಉತ್ತಮ ಗುರುಗಳಿದ್ದಾರೆ. ಮುಂದೆ ನಮಗೆ ಗುರಿ ಎಂಬುದು ಇರಬೇಕು.ಈ ತಿಳಿವಳಿಕೆ ಕಾರಣವಾಗಿದೆ. ಪಿಯುಸಿ ವಿಜ್ಞಾನ ವಿಭಾಗದೊಂದಿಗೆ ಜೆಇಇ ಗುರಿ ಇದೆ ಎಂದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ