SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ.

ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಒಟ್ಟು 6356 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದು ಅದರಲ್ಲಿ 6233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 123 ವಿದ್ಯಾರ್ಥಿಗಳು ಗೈರು ಉಳಿದಿದ್ದಾರೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಮೊಹ್ಮದಇಲಿಯಾಸ್ ಬಾಗವಾನ ಮಾಹಿತಿ ನೀಡಿದರು.

ಅತೀ ಸೂಕ್ಷö್ಮ ಪರೀಕ್ಷಾ ಕೇಂದ್ರಗಳೆoದು ಗುರುತಿಸಲಾಗಿದ್ದ ಬಳಬಟ್ಟಿ ಸರಕಾರಿ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊoದಿಗೆ ಬಳಬಟ್ಟಿ ಪರೀಕ್ಷಾ ಕೇಂದ್ರದಲ್ಲಿ ಎರಡು ಗಂಟೆಗಳ ಕಾಲ ಬೀಡುಬಿಟ್ಟು ಹೊರಗಿನ ಜನರನ್ನು ನಿಯಂತ್ರಿಸಿದರಲ್ಲದೇ ಯಾವುದೇ ಗೊಂದಲಗಳಿಗೆ ಆಸ್ಪದ ದೊರೆಯದಂತೆ ನೋಡಿಕೊಂಡರು.

ತಾಳಿಕೋಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಇಂಗಳಗೇರಿ ಪರೀಕ್ಷಾ ಕೇಂದ್ರಕ್ಕೆ ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.

ಇನ್ನುಳಿದಂತೆ ಮೈಲೇಶ್ವರ ಬ್ರಿಲಿಯಂಟ್ ಶಾಲೆಯಲ್ಲಿ ವಿಕಲಚೇತನ ಅಭ್ಯರ್ಥಿಯೊಬ್ಬರು ಡಿಡಿಪಿಐ ಅವರ ಅನುಮತಿ ಮೇರೆಗೆ ಸಹಾಯಕರನ್ನು ಪಡೆದುಕೊಂಡು ಪರೀಕ್ಷೆ ಎದುರಿಸಿದರು.ವಿಚಕ್ಷಣ ದಳದ ಅಧಿಕಾರಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ ಮಾತನಾಡಿ, ನಾವು ಭೇಟಿ ಕೊಟ್ಟಿರುವ ಎಲ್ಲ ಕಡೆಯೂ ಪರೀಕ್ಷೆಗಳು ಶಾಂತವಾಗಿ ಸುಸೂತ್ರವಾಗಿ ನಡೆದಿವೆ.ಯಾವುದೇ ಗೊಂದಲಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ತಾಳಿಕೋಟಿಯ ಎಸ್.ಕೆ.ಪಪೂ ಕಾಲೇಜು,ಶ್ರೀ ಸಂಗಮೇಶ್ವರ ಪ್ರೌಢಶಾಲೆ,ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆ,ನಾಲತವಾಡದ ಶ್ರೀ ವೀರೇಶ್ವರ ಪಪೂ ಕಾಲೇಜು,ಹಿರೂರ ಶ್ರೀ ಭೋಗೇಶ್ವರ ಪ್ರೌಢಶಾಲೆ,ರಕ್ಕಸಗಿ ಕರ್ನಾಟಕ ಪಬ್ಲಿಕ್ ಶಾಲೆ,ನಾಗರಬೆಟ್ಟದ ಎಸ್.ಡಿ.ಕೆ ಪ್ರೌಢಶಾಲೆ, ನಾಗರಬೆಟ್ಟ ಆಕ್ಸ್ಫರ್ಡ್ ಆಂಗ್ಲಮಾಧ್ಯಮ ಪ್ರೌಢಶಾಲೆ,ಮಿಣಜಗಿ ಕ್ರಾಸ್‌ನ ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆ,ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆ,ಬಸರಕೋಡ ಪವಾಡ ಬಸವೇಶ್ವರ ಪ್ರೌಢಶಾಲೆ,ಕೊಡಗಾನೂರದ ಜೆ.ಎಸ್.ಎಸ್.ಪ್ರೌಢಶಾಲೆ ಬ್ಯಾಲ್ಯಾಳ ಕ್ರಾಸ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ಪರೀಕ್ಷೆಗಳು ನಡೆದಿವೆ.

ಬಿಇಒ ಬಿ.ಎಸ್.ಸಾವಳಗಿ,ಬಿಆರ್‌ಸಿ ಆರ್.ಧಮ್ಮೂರಮಠ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್ ಮೊದಲಾದವರು ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಿ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ,ಬಳಬಟ್ಟಿ,ಕಂದಗನೂರ ಮೊದಲಾದ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಹೇಗಿತ್ತು ಎಂಬುದರ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊoಡರು.


ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ವಿದ್ಯಾರ್ಥಿನಿ:
‘ನಾನು ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿದ್ದೇನೆ.ನಮ್ಮ ಶಾಲೆಯಲ್ಲಿ ಹತ್ತನೇ ತರಗತಿ ಪೂರ್ವಸಿದ್ಧತೆ ಪರೀಕ್ಷೆ ಸಮಯದಲ್ಲಿ ತಿಳಿಸಿದ್ದಂತೆ ಅದೇ ಮಾದರಿಯಲ್ಲಿ ಪ್ರಶ್ನೆಗಳು ಸರಳವಾಗಿದ್ದ ಕಾರಣ ನಮಗೆ ಬರೆಯುವುದಕ್ಕೆ ಕಷ್ಟವೆನಿಸಲಿಲ್ಲ.ಇದಕ್ಕಾಗಿ ನಾನು ಎಲ್ಲ ವಿದ್ಯಾರ್ಥಿಗಳ ಪರವಾಗಿ ರಾಜ್ಯದ ಶಿಕ್ಷಣ ಸಚಿವರಿಗೆ ಅಭಿನಂದಿಸುತ್ತೇನೆ ಎಂದು ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನದ ಪರೀಕ್ಷೆ ಮುಗಿಸಿಕೊಂಡು ಹೊರ ಬಂದ ಪಟ್ಟಣದ ಅಭ್ಯುದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಹೇಳಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ