SSLC Exam: The responsibility of the Chief Superintendent to the Headmasters of the High Schools where there is an examination center..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

Ad
Ad

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿಯನ್ನು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

Ad
Ad

ತಾಳಿಕೋಟಿಯ ಎರಡು ಪರೀಕ್ಷಾ ಕೇಂದ್ರಗಳು ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಆಯಾ ಶಾಲೆಗಳ ಪ್ರೌಢಶಾಲೆಯ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವುದು ಇದೀಗ ಬಿಸಿ ಚರ್ಚೆಗೆ ಕಾರಣವಾಗಿದೆ.

ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರು ಪೂರ್ವಭಾವಿ ಸಭೆಯಲ್ಲಿ ಸದರಿ ಮುಖ್ಯಶಿಕ್ಷಕರನ್ನು ಬೇರೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ತಿಳಿಸಿದರೂ ಅದಕ್ಕೆ ಬಿಒಒ ಸಾವಳಗಿ ಅವರು, ಪರೀಕ್ಷೆ ಮಂಡಳಿ ನಿರ್ದೇಶಕರಿಂದ ಅನುಮತಿ ಪಡೆಯಲಾಗಿದ್ದು ಈಗ ಬದಲಾಯಿಸುವುದಕ್ಕೆ ಬರುವುದಿಲ್ಲ ಎಂದು ಉತ್ತರಿಸಿದ್ದಾರೆ.

ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಲ್ಲಿ 14 ಕೇಂದ್ರಗಳ ಜವಾಬ್ದಾರಿ ಬೇರೆ ಶಾಲೆಯ ಮುಖ್ಯಶಿಕ್ಷಕರಿದ್ದರೆ ಈ ಐದು ಕೇಂದ್ರಗಳಿಗೆ ಮಾತ್ರ ಆಯಾ ಶಾಲೆಗಳ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆ ಚರ್ಚೆಗೆ ಗ್ರಾಸವಾಗಿದೆ.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.