SSLC Exam: The responsibility of the Chief Superintendent to the Headmasters of the High Schools where there is an examination center..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿಯನ್ನು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ತಾಳಿಕೋಟಿಯ ಎರಡು ಪರೀಕ್ಷಾ ಕೇಂದ್ರಗಳು ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಆಯಾ ಶಾಲೆಗಳ ಪ್ರೌಢಶಾಲೆಯ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವುದು ಇದೀಗ ಬಿಸಿ ಚರ್ಚೆಗೆ ಕಾರಣವಾಗಿದೆ.

ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರು ಪೂರ್ವಭಾವಿ ಸಭೆಯಲ್ಲಿ ಸದರಿ ಮುಖ್ಯಶಿಕ್ಷಕರನ್ನು ಬೇರೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ತಿಳಿಸಿದರೂ ಅದಕ್ಕೆ ಬಿಒಒ ಸಾವಳಗಿ ಅವರು, ಪರೀಕ್ಷೆ ಮಂಡಳಿ ನಿರ್ದೇಶಕರಿಂದ ಅನುಮತಿ ಪಡೆಯಲಾಗಿದ್ದು ಈಗ ಬದಲಾಯಿಸುವುದಕ್ಕೆ ಬರುವುದಿಲ್ಲ ಎಂದು ಉತ್ತರಿಸಿದ್ದಾರೆ.

ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಲ್ಲಿ 14 ಕೇಂದ್ರಗಳ ಜವಾಬ್ದಾರಿ ಬೇರೆ ಶಾಲೆಯ ಮುಖ್ಯಶಿಕ್ಷಕರಿದ್ದರೆ ಈ ಐದು ಕೇಂದ್ರಗಳಿಗೆ ಮಾತ್ರ ಆಯಾ ಶಾಲೆಗಳ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆ ಚರ್ಚೆಗೆ ಗ್ರಾಸವಾಗಿದೆ.

Latest News

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ ಹೇಳಿದರು.ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಿಚ್ಚಿಟ್ಟರು. ನಮ್ಮ ಅವಧಿ ಆರಂಭವಾಗಿದ್ದೇ