SSLC Exam: The responsibility of the Chief Superintendent to the Headmasters of the High Schools where there is an examination center..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಎಸ್.ಎಸ್.ಎಲ್.ಸಿ ಪರೀಕ್ಷೆ:ಪರೀಕ್ಷಾ ಕೇಂದ್ರವಿರುವ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಮುಖ್ಯ ಅಧಿಕ್ಷಕರ ಜವಾಬ್ದಾರಿ..!

ಮುದ್ದೇಬಿಹಾಳ : ಪರೀಕ್ಷೆ ನಡೆಯುವ ಶಿಕ್ಷಣ ಸಂಸ್ಥೆ, ಪ್ರೌಢಶಾಲೆ ಮುಖ್ಯಗುರುಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿ ಅದೇ ಶಾಲೆಯಲ್ಲಿರುವ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೆ ಶಿಕ್ಷಣ ಇಲಾಖೆ ನಿರ್ಬಂಧ ವಿಧಿಸಿದೆ.ಆದರೆ ಇಲ್ಲಿನ ತಾಲ್ಲೂಕು ಶಿಕ್ಷಣಾಧಿಕಾರಿಗಳು ನಿಯೋಜಿಸಿರುವ ಶಾಲೆಯ ವೇಳಾ ಪಟ್ಟಿಯಲ್ಲಿ ಸ್ಥಳೀಯ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯಶಿಕ್ಷಕರಿಗೆ ಮುಖ್ಯ ಅಧೀಕ್ಷಕರ ಜವಾಬ್ದಾರಿಯನ್ನು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ತಾಳಿಕೋಟಿಯ ಎರಡು ಪರೀಕ್ಷಾ ಕೇಂದ್ರಗಳು ಹಾಗೂ ಮುದ್ದೇಬಿಹಾಳ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಿಗೆ ಆಯಾ ಶಾಲೆಗಳ ಪ್ರೌಢಶಾಲೆಯ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವುದು ಇದೀಗ ಬಿಸಿ ಚರ್ಚೆಗೆ ಕಾರಣವಾಗಿದೆ.

ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರು ಪೂರ್ವಭಾವಿ ಸಭೆಯಲ್ಲಿ ಸದರಿ ಮುಖ್ಯಶಿಕ್ಷಕರನ್ನು ಬೇರೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ತಿಳಿಸಿದರೂ ಅದಕ್ಕೆ ಬಿಒಒ ಸಾವಳಗಿ ಅವರು, ಪರೀಕ್ಷೆ ಮಂಡಳಿ ನಿರ್ದೇಶಕರಿಂದ ಅನುಮತಿ ಪಡೆಯಲಾಗಿದ್ದು ಈಗ ಬದಲಾಯಿಸುವುದಕ್ಕೆ ಬರುವುದಿಲ್ಲ ಎಂದು ಉತ್ತರಿಸಿದ್ದಾರೆ.

ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಲ್ಲಿ 14 ಕೇಂದ್ರಗಳ ಜವಾಬ್ದಾರಿ ಬೇರೆ ಶಾಲೆಯ ಮುಖ್ಯಶಿಕ್ಷಕರಿದ್ದರೆ ಈ ಐದು ಕೇಂದ್ರಗಳಿಗೆ ಮಾತ್ರ ಆಯಾ ಶಾಲೆಗಳ ಮುಖ್ಯಶಿಕ್ಷಕರನ್ನೇ ಮುಖ್ಯ ಅಧೀಕ್ಷಕರನ್ನಾಗಿ ನಿಯೋಜಿಸಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆ ಚರ್ಚೆಗೆ ಗ್ರಾಸವಾಗಿದೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ