ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ಮುದ್ದೇಬಿಹಾಳ : ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಅವರು ದೇಶವೇ ಹೊರಳಿ ನೋಡುವಂತ ಸಾಧನೆ ಮಾಡಲು ಪ್ರೇರೆಪಿಸುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯುಂದ ಶನಿವಾರ ಲಿಂ. ಅಭಿನವ ಕುಮಾರ ಚನ್ನಬಸವ ಶ್ರೀಗಳ ನುಡಿನಮನ ಮತ್ತು ರಾಜ್ಯ ಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಯುವಕರು ಗುಟ್ಖಾ , ಮಟ್ಖಾ ಚಟಕ್ಕೆ ಬಿದ್ದಿದ್ದಾರೆ. ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ. ಆಚಾರ, ವಿಚಾರ ಸಂಸ್ಕೃತಿಗಳನ್ನು ಕಲಿಸಲು ಪಾಲಕರು ಮುಂದಾಗಬೇಕು ಎಂದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಸಾನಿಧ್ಯ ವಹಿಸಿದ್ದ ಯರಝರಿಯ ಯಲ್ಲಾಲಿಂಗ ಮಠದ ಮಲ್ಲಾರಲಿಂಗ ಸ್ವಾಮೀಜಿ, ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಿದ್ದನಗೌಡ ಮಂಗಳೂರ, ಪತ್ರಕರ್ತ ಚೇತನ ಶಿವಶಿಂಪಿ, ಶಿವಾನಂದ ವಾಲಿ, ಪ್ರಶಾಂತ ಕಾಳೆ, ಎಸ್.ಎಚ್.ಲೊಟಗೇರಿ, ಚಂದ್ರಶೇಖರ ಶಿವಯೋಗಿಮಠ, ಹೇಮಾ ಬಿರಾದಾರ, ಶರಣು ಟಕ್ಕಳಕಿ, ಅನಿಲ ತೇಲಂಗಿ ಇವರುಗಳಿಗೆ ರಾಜ್ಯಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಜೀರಲಭಾವಿಯ ನಿತ್ಯಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮನಗೂಳಿಯ ಪಟ್ಟಣ ಪಂಚಾಯತ ಅಧ್ಯಕ್ಷ ಎಂ.ಡಿ.ಮೆತ್ರಿ, ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಗ್ರಾ.ಪಂ ಮಾಜಿ ಅಧ್ಯಕ್ಷ ಜಾವಿದ ಇನಾಮದಾರ, ಮುಖಂಡರಾದ ನಿತ್ಯಾನಂದ ಹಿರೇಮಠ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ಇತರರು ಇದ್ದರು. ಅಶೋಕ ಗುಂಡಿನಮನಿ ನಿರೂಪಿಸಿದರು. ರೇಖಾವತಿ ಎಂ. ಎಸ್. ವಂದಿಸಿದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು