ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುವುದು ದೊಡ್ಡ ಮಾತಲ್ಲ.ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ ಅಲ್ಲಿ ಮಕ್ಕಳಿಗೆ ಶಿಕ್ಷಣವೇ ಪ್ರಧಾನವಾಗಿ ಕೊಡುವ ಸಂಸ್ಥೆಗಳನ್ನು ಬೆಳೆಸುವುದು ಸಾಹಸದ ಕಾರ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಹೇಳಿದರು.

ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಚೆನ್ನಬಸವ ಶ್ರೀ ಸ್ಕಾಲರ್‌ಶಿಪ್ ಎಕ್ಸಾಮ್‌ನಲ್ಲಿ ವಿಜೇತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೆಳಮಟ್ಟದಲ್ಲಿ ಬೆಳೆದು ಬಂದಿರುವ ಮಂಜುನಾಥ ಕೊಪ್ಪ ಅವರು ಇಂದು ಹಳ್ಳಿಗಾಡಿನಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ 500ಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ಕೊಡುತ್ತಿರುವುದು ಸಾಧನೆಯ ಮೈಲುಗಲ್ಲು.ಕಷ್ಟಪಟ್ಟರೆ ಎಂತಹ ಕೆಲಸವನ್ನು ಸಾಧಿಸಬಹುದು ಎಂಬುದಕ್ಕೆ ಕೊಪ್ಪ ಅವರೇ ನಿದರ್ಶನ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎo.ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹೆದರಬಾರದು.ವಿದ್ಯಾರ್ಥಿಗಳು ಹೇಗೆ ಓದಬೇಕು ಎಂದರೆ ಪರೀಕ್ಷೆಯ ಫಲಿತಾಂಶ ಬಂದಾಗ ವಿದ್ಯಾರ್ಥಿಗಳ ಹೆಸರನ್ನು ರಾಜ್ಯವೇ ಎಲ್ಲ ಕಡೆ ಓದುವಂತಾಗಬೇಕು.ಅOತಹ ಸಾಧನೆ ತೋರಬೇಕು ಎಂದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಘಟನಾ ಸಂಚಾಲಕ ಹರೀಶ ನಾಟೀಕಾರ , ಬಡವರ ಮಕ್ಕಳಿಗೆ ಅವರು ಕೊಟ್ಟಷ್ಟೇ ಶುಲ್ಕ ಪಡೆದುಕೊಂಡು ಶಿಕ್ಷಣದ ಸೌಲಭ್ಯ ಒದಗಿಸುತ್ತಿರುವ ಇಂತಹ ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿರುವುದು ಹೆಮ್ಮೆಯ ಸಂಗತಿ.ಲಕ್ಷಾoತರ ರೂಪಾಯಿ ಶುಲ್ಕ ಕೊಟ್ಟು ತಮ್ಮ ವiಕ್ಕಳನ್ನು ದೊಡ್ಡ ಶಾಲೆಗಳಿಗೆ ಕಳಿಸಲು ಆಗದ ಪಾಲಕರಿಗೆ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ಕೊಡುತ್ತಿರುವ ಶಾಲೆಗಳು ವರದಾನವಾಗಿದೆ.ಈ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ದಿವ್ಯ ಸಾನಿಧ್ಯ ವಹಿಸಿದ್ದ ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಪ್ರಭುಗಳು, ನಿವೃತ್ತ ಧೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ , ಸಂಸ್ಥೆಯ ಅಧ್ಯಕ್ಷ ಮಂಜುನಾಥ ಎಸ್.ಕೊಪ್ಪ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ ಮಾತನಾಡಿದರು.ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ,ಶಿಕ್ಷಕಿ ಸುಮಂಗಲಾ ಕೋಳೂರ,ತಾಳಿಕೋಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ, ನ್ಯಾಶನಲ್ ಎಸ್.ಎನ್.ಡಿ ಪಬ್ಲಿಕ್ ಶಾಲೆ ಮುಖ್ಯಗುರುಮಾತೆ ರೇಖಾ ಎಂ.ಎಸ್., ಇದ್ದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಎಂ.ಎಸ್.ಕೊಪ್ಪ ಸ್ವಾಗತಿಸಿದರು.ಜಿ.ಎಚ್.ಗೌರೋಜಿ , ಎಚ್.ಆರ್.ಬಾಗಲಕೋಟ ನಿರೂಪಿಸಿದರು.

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :
ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಸಾಗರಕುಮಾರ ಉಕ್ಕಲಿ,ಹೋರಾಟಗಾರರಾದ ಕುಮಾರಸ್ವಾಮಿ ಹಿರೇಮಠ, ಹರೀಶ ನಾಟೀಕಾರ ಹಾಗೂ ಶೈಕ್ಷಣಿಕ ಕ್ಷೇತ್ರದಿಂದ ಎಸ್.ಎಂ.ಜೋಗಿನ(ಅಡವಿ ಸೋಮನಾಳ), ಎಸ್.ಪಿ.ಢವಳಗಿ(ಆಲೂರ),ರೇಷ್ಮಾ ಶೇಖ(ಸಾಲೋಡಗಿ),ವೀರೇಶ ಹುಲಮನಿ(ಬಳಬಟ್ಟಿ),ಕಾಶೀನಾಥ ಸೂಳಿಭಾವಿ(ಬಸರಕೋಡ),VIJAYALAXMI ನಿಡಗುಂದಿ(ಢವಳಗಿ),ಎA.ಕೆ.ಪೂಜಾರಿ (ಹಡಲಗೇರಿ),ಜಯಶ್ರೀ ಕರಡ್ಡಿ(ಇಂಗಳಗೇರಿ),ಎಸ್.ಜಿ.ನೀರಲಗಿ(ಕೊಣ್ಣೂರ),ಸAಗಣ್ಣ ಹೊಸಮನಿ(ಮಡಿಕೇಶ್ವರ),ಜ್ಯೋತಿ ಬಿರಾದಾರ(ಮಿಣಜಗಿ),ಎಸ್.ಎಸ್.ಪಾಟೀಲ(ಮುದ್ದೇಬಿಹಾಳ),ಬಸಮ್ಮ ಅಮಾತೆಗೌಡರ(ನಾಲತವಾಡ),,VIJAYALAXMI ಭೋವಿ(ರಕ್ಕಸಗಿ), ಎಸ್.ಐ.ಪತ್ತಾರ(ತಾಳಿಕೋಟಿ), ವಿ.ಎಸ್.ತೆಗ್ಗಿ(ತಂಗಡಗಿ), ಜಿ.ಬಿ.ಬಿರಾದಾರ(ತುಂಬಗಿ), ಭೀಮಪ್ಪ ಮಾದರ(ಹುಲ್ಲೂರ), ಎಂ.ಬಿ.ಪಾಟೀಲ(ಹಿರೇಮುರಾಳ), ಆರ್.ಎಂ.ಲಮಾಣಿ(ಯರಝರಿ),ಬಿ.ಎ.ಉಡಚಣಕರ(ಹುಲ್ಲೂರ ಉರ್ದು),ವಾಯ್.ಎಸ್.ಖಾದ್ರಿ(ಬಿದರಕುಂದಿ ಉರ್ದು),ಎಚ್.ಎಂ.ಮಕಾನದಾರ(ಕೊಣ್ಣೂರ ಉರ್ದು),ಯಮನಪ್ಪ ಬಾಗೇವಾಡಿ(ಹುಲ್ಲೂರ),ಎಂ.ಬಿ.ಗುಡಗುOಟಿ(ಹಡಲಗೇರಿ),ನಿOಗಪ್ಪ ದೊಡಮನಿ(ಹಡಲಗೇರಿ),ಅಬ್ದುಲರಶೀದ ಜಮಾದಾರ(ಮುದ್ದೇಬಿಹಾಳ ಉರ್ದು ),ಚಿದಾನಂದ ಗುಡ್ಡದ(ಕೊಡಗಾನೂರ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ