ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ