ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

Boat Online such broker bear blast slot free spins as Yahtzee

BlogsBroker bear blast slot free spins: The brand new Dice:Yahtzee ThumbAdded

Păcănele Online Sweet nv casino Bonanza Gratis În Dans Pacanele

ContentNv casino | Caracteristica Bonus Roata Grămadă Să BaniSă Sunt Pacanele

Hra Chicken Road od InOut Games se blíží k velikosti velkého města.

Theme a Design Hra Chicken Road je netradiční online herní automat

Hühnerrad-Münzspiel im Stil von Casino Slot Machine – Die Ernte des Glücks bei Chicken Cross

In den letzten Jahren haben sich Online-Casinos um die Welt zu

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ ಉದ್ಘಾಟನೆ,ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪರಶುರಾಮ ವಡ್ಡರ ಮಾತನಾಡಿ, ವೈದ್ಯಕೀಯ ಸೇವೆಯನ್ನು