ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ