ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ