ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಹಾಗೂ ಸಹಾಯಕಿಯರ ಸೇವಾ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ಕೇಂದ್ರಗಳ ಅವಧಿ ಮುಗಿದ ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಶಾಂತಾ ಮಾಮನಿ ಅವರು ಕಾನೂನು ಬದ್ಧವಾಗಿ ಅಲ್ಲಿನ ನಿವಾಸಿಗಳಿಗೆ ಒಳ್ಳೆಯ ಸೇವೆ ನೀಡಿದ್ದರೂ ಸಿಡಿಪಿಒ ಅವರ ಕುತಂತ್ರದಿAದ ರೇಣುಕಾ ಎಂಬ ಕಾರ್ಯಕರ್ತೆಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಆದೇಶ ಮಾಡಿ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ಕೇಳಲು ಹೋದ ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ರೇಣುಕಾ ಹಾಗೂ ಸಹಾಯಕಿ, ಅವರ ಪುತ್ರಿ ಆಗಮಿಸಿ ಕೇಂದ್ರದಲ್ಲಿ ಬಡಿದಿದ್ದಾರೆ. ಹೊಡೆದಾಡುವ ಮುನ್ನ ರೇಣುಕಾ ಅವರು ವ್ಯವಸ್ಥಿತವಾಗಿ ಕೆಲವರನ್ನು ಕರೆತಂದು ಘಟನೆಯ ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.ಇದೊಂದು ಪೂರ್ವನಿಯೋಜಿತ ಕೃತ್ಯವಾಗಿದ್ದು ಶಾಂತಾ ಮಾಮನಿ ವಿರುದ್ಧ ದೂರು ದಾಖಲಿಸುವ ಕುತಂತ್ರವಾಗಿದೆ.ಇದಕ್ಕೆಲ್ಲ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರೇ ನೇರ ಹೊಣೆಗಾರರು.ಪಿಲೇಕೆಮ್ಮ ನಗರದ ಕೇಂದ್ರದಿAದ ಸಂಗಮೇಶ್ವರ ನಗರದ ಅಂಗನವಾಡಿ ಕೇಂದ್ರಕ್ಕೆ ಶಾಂತಾ ಮಾಮನಿ ಅವರನ್ನು ವರ್ಗಾವಣೆ ಮಾಡಿರುವುದಾಗಿ ಹೇಳುತ್ತಿರುವ ಅಧಿಕಾರಿಗಳು ಅಲ್ಲಿಗೆ ಅವರನ್ನು ಹಾಜರುಪಡಿಸದೇ ಬಿಟ್ಟಿದ್ದೇಕೆ ? ಎಂದು ಪ್ರಶ್ನಿಸಿದರು.

ಶಾಂತಾ ಮಾಮನಿ ಅವರಷ್ಟೇ ಅಲ್ಲದೇ ತಾಲ್ಲೂಕಿನ ಹಲವು ಅಂಗನವಾಡಿ ನೌಕರರಿಗೆ ಸಿಡಿಪಿಒ ಕುಂಬಾರ ಅವರಿಂದ ಸಮಸ್ಯೆ ಆಗುತ್ತಿದೆ. ಕಾರ್ಯಕರ್ತೆಯ ವರ್ಗಾವಣೆಗೆ ಶಾಸಕರು ಪತ್ರ ಕೊಟ್ಟಿದ್ದಾರೆ ಎಂಬುದನ್ನು ನಾವು ನಂಬುವುದಿಲ್ಲ ಎಂದು ಹೇಳಿದರು.

ಕಾರ್ಯಕರ್ತೆ ಶಾಂತಾ ಮಾಮನಿ ಮಾತನಾಡಿ, ನಾನು ಕಳೆದ 30 ವರ್ಷಗಳಿಂದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೇನೆ.ನನಗೆ ಅಲ್ಲಿನ ಪುರಸಭೆ ಸದಸ್ಯೆಯ ಪುತ್ರನಿಂದ ಕಿರುಕಳ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ರೇಣುಕಾ ಅವರನ್ನು ಕೇಂದ್ರಕ್ಕೆ ತರಬೇಕು.ನನ್ನನ್ನು ಅಲ್ಲಿಂದ ಬೇರೆ ಕಳಿಸಬೇಕು ಎಂಬುದು ಇವರ ದುರುದ್ದೇಶವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತೆಯರಾದ ಶೋಭಾ ಘಾಟಗೆ, ಶೋಭಾ ಕಾಖಂಡಕಿ, ವಿದ್ಯಾ ಮುರಾಳ, ಗುರುಬಾಯಿ ಕಾಳಗಿ, ಶಮಶ್ಯಾದ ಹುಣಶ್ಯಾಳ, ಸುನೀತ, ನೀಲಮ್ಮ ತೊಂಡಿಹಾಳ, ಮಂಜುಳಾ ಜಾಧವ, ಅಂಬುಜಾ ಕುಲಕರ್ಣಿ, ನಿರ್ಮಲಾ ನಾಶಿ, ರಾಜೇಶ್ವರಿ ಮಮದಾಪೂರ, ಷರೀಫಾ ಸಗರ,ಜೈಬುನ್ನಿಸಾ ದಿಡ್ಡಿಮನಿ ಇದ್ದರು.


ಹೋರಾಟಕ್ಕೆ ಬರುವಾಗ ಕಾರು ಅಡ್ಡಗಟ್ಟಿದ್ದಾರೆ:
ಸಿಡಿಪಿಒ ವಿರುದ್ಧ ಹೋರಾಟಕ್ಕೆ ಬರುವಾಗ ನನ್ನ ಕಾರನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ಅಡ್ಡಗಟ್ಟಿದರು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಪಾಟೀಲ್ ದೂರಿದರು. ಕುಂಟೋಜಿ ಚರ್ಚ್ ದಾಟಿ ಬರುವ ರಸ್ತೆಯಲ್ಲಿ ನಾಲ್ವರು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ ಹೋರಾಟಕ್ಕೆ ಏಕೆ ಹೊರಟಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ ಕಾರಿನಿಂದ ಕೆಳಗಿಳಿಯುವಂತೆ ದಬಾಯಿಸಿದ್ದಾರೆ.ಆದರೆ ನಾನು ರಸ್ತೆಯಲ್ಲಿ ಇತರ ವಾಹನಗಳ ಚಾಲಕರ ಸಹಾಯದಿಂದ ಮುದ್ದೇಬಿಹಾಳದ ಹೋರಾಟದ ಸ್ಥಳಕ್ಕೆ ಬಂದಿದ್ದೇನೆ. ಹೋರಾಟ ಮಾಡುವುದಕ್ಕೂ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ನೀಲಮ್ಮ ಆರೋಪಿಸಿದರು.

.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್