ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಬಿದರಕುಂದಿ ಗ್ರಾಮದ ಶ್ರೀಶೈಲ ಸಿದ್ಧಣ್ಣ ಬೂದಿಹಾಳ ಎಂಬಾತನು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿ ತಾಲ್ಲೂಕು ಮದರಿ ಗ್ರಾಮದ ಜಾತ್ರೆಯಲ್ಲಿ ಎತ್ತುಗಳನ್ನು ಖರೀದಿಸಿಕೊಂಡು ಹುನಗುಂದ ತಾಲ್ಲೂಕು ಬೇವಿನಮಟ್ಟಿಗೆ ತೆರಳುತ್ತಿದ್ದ ಗೂಡ್ಸ್ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಭಂಗಿ ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ಮುಗಿಲು ಮುಟ್ಟಿದ ಆಕ್ರಂದನ:
ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಹೊರಟ್ಟಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಿಳಿಯುತ್ತಿದ್ದಂತೆ ಮೃತನ ಸಂಬAಧಿಕರು,ಆತನ ಸ್ನೇಹಿತರು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದರು.ಮೃತಪಟ್ಟ ವಿದ್ಯಾರ್ಥಿಯ ತಂದೆ ತಾಯಿಯ ಆಕ್ರಂದನ ಮುಗಿಲುಮುಟ್ಟಿತ್ತು. ಮಹೇಶ ಉತ್ತಮ ಕಬಡ್ಡಿ ಕ್ರೀಡಾಪಟು ಕೂಡಾ ಆಗಿದ್ದ ಎಂದು ಬಿದರಕುಂದಿ ಕಬಡ್ಡಿ ತರಬೇತಿದಾರ ಚೇತನ ಹೇಳಿದರು.ಮುಖ್ಯಪರೀಕ್ಷೆ ಎದುರಿಸುವ ಮುನ್ನವೇ ವಿಧಿ ಆತನ ಜೀವನದ ಪರೀಕ್ಷೆಯನ್ನೇ ಅಪಘಾತದ ರೂಪದಲ್ಲಿ ಕರೆದೊಯ್ದಿರುವುದು ಗ್ರಾಮಸ್ಥರಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ