Students protest in front of BEO office

ಬಿಇಒ ಕಚೇರಿ ಎದುರಿಗೆ ವಿದ್ಯಾರ್ಥಿಗಳ ಧರಣಿ: ಖೋ ಖೋ ಫೈನಲ್ ಪಂದ್ಯದಲ್ಲಿ ಅನ್ಯಾಯ-ಪ್ರತಿಭಟನೆ

ಬಿಇಒ ಕಚೇರಿ ಎದುರಿಗೆ ವಿದ್ಯಾರ್ಥಿಗಳ ಧರಣಿ: ಖೋ ಖೋ ಫೈನಲ್ ಪಂದ್ಯದಲ್ಲಿ ಅನ್ಯಾಯ-ಪ್ರತಿಭಟನೆ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿಯಲ್ಲಿ ನಡೆದ ಹುಲ್ಲೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಖೋ ಖೋ ಪಂದ್ಯಾವಳಿಯಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿರುದ್ಧ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಆಟವಾಡಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ತಾಲ್ಲೂಕಿನ ಬಸರಕೋಡದ ಯುವಕರು, ವಿದ್ಯಾರ್ಥಿಗಳು ಗುರುವಾರ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಚೇರಿ ವ್ಯವಸ್ಥಾಪಕ ಬಿ.ಎಸ್.ಪಾಟೀಲ್, ಬಿಆರ್‌ಪಿ ಪಿ.ಎ.ಬಾಳಿಕಾಯಿ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಬಸರಕೋಡದ ಯುವ ಮುಖಂಡ ಬಸವರಾಜ ಬಿರಾದಾರ, ಸಂಗಮೇಶ ಕಠಾರೆ, ಯರಝರಿಯಲ್ಲಿ ಹುಲ್ಲೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಬಿ.ವಾಯ್.ಕವಡಿ, ಬಿ.ಆರ್.ಪಿ ರಾಜು ಕೋನರೆಡ್ಡಿ, ಸ್ಥಳೀಯ ಶಾಲೆಯ ಮುಖ್ಯಗುರುಗಳು, ನಿರ್ಣಾಯಕರು ಖೋ ಖೋ ಆಟದಲ್ಲಿ ಬಸರಕೋಡದ ಮಾತೋಶ್ರೀ ಶಿವಲಿಂಗಮ್ಮ ನಾಡಗೌಡರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವಂತ ನಿರ್ಧಾರಗಳನ್ನು ಕೈಗೊಂಡಿದ್ದಾರೆ.ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಆಡಿಸಿದ್ದಲ್ಲದೇ ತಂಡವನ್ನು ಅನರ್ಹಗೊಳಿಸುವ ಬೆದರಿಕೆ ಒಡ್ಡಿದ್ದಾರೆ. ಇದರಿಂದ ಬಸರಕೋಡದ ವಿದ್ಯಾರ್ಥಿಗಳ ಮಾನಸಿಕ ಸ್ಕೈರ್ಯ ಕುಸಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಆಡಿ ಸೋಮು ವಡ್ಡರ, ಬಸವರಾಜ ಮಂಕಣಿ, ಸಂತೋಷ ವಡ್ಡರ, ಮುದಕಪ್ಪ ಮಾದರ, ಶ್ರೀಶೈಲ ಚಲವಾದಿ, ಬಸವರಾಜ ವಡ್ಡೋಡಗಿ ಮೊದಲಾದವರು ಇದ್ದರು.

ವಿದ್ಯಾರ್ಥಿಗಳ ಸಮೇತ ಗ್ರಾಮಸ್ಥರು ನಾಲ್ಕು ತಾಸು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೂ ಸಮೀಪದಲ್ಲಿಯೇ ಇದ್ದ ಬಿಇಒ ಬಿ.ಎಸ್.ಸಾವಳಗಿ ಸ್ಥಳಕ್ಕೆ ಬಂದು ಪ್ರತಿಭಟನಾ ನಿರತರ ಮನವಿ ಆಲಿಸಲಿಲ್ಲ ಎಂದು ಮುಖಂಡ ಬಸವರಾಜ ಬಿರಾದಾರ ದೂರಿದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಯರಝರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಇಬ್ಬರ ದಾಖಲೆಗಳು ಸರಿಯಾಗಿ ಇಲ್ಲದ ಕಾರಣ ಅವರನ್ನು ಫೈನಲ್ ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಬಸರಕೋಡ ಶಾಲೆಯ ವಿದ್ಯಾರ್ಥಿಗಳು ವಿಜೇತರು ಎಂದು ಘೋಷಿಸಿ ಅವರಿಗೆ ತಾಲ್ಲೂಕು ಮಟ್ಟದಲ್ಲಿ ಆಡುವುದಕ್ಕೆ ಅನುಮತಿ ಕಲ್ಪಿಸಲಾಗಿದೆ ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವಾಯ್.ಕವಡಿ ಪತ್ರಿಕೆಗೆ ಹೇಳಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ