Students protest in front of BEO office

ಬಿಇಒ ಕಚೇರಿ ಎದುರಿಗೆ ವಿದ್ಯಾರ್ಥಿಗಳ ಧರಣಿ: ಖೋ ಖೋ ಫೈನಲ್ ಪಂದ್ಯದಲ್ಲಿ ಅನ್ಯಾಯ-ಪ್ರತಿಭಟನೆ

ಬಿಇಒ ಕಚೇರಿ ಎದುರಿಗೆ ವಿದ್ಯಾರ್ಥಿಗಳ ಧರಣಿ: ಖೋ ಖೋ ಫೈನಲ್ ಪಂದ್ಯದಲ್ಲಿ ಅನ್ಯಾಯ-ಪ್ರತಿಭಟನೆ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿಯಲ್ಲಿ ನಡೆದ ಹುಲ್ಲೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಖೋ ಖೋ ಪಂದ್ಯಾವಳಿಯಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿರುದ್ಧ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಆಟವಾಡಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ತಾಲ್ಲೂಕಿನ ಬಸರಕೋಡದ ಯುವಕರು, ವಿದ್ಯಾರ್ಥಿಗಳು ಗುರುವಾರ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಚೇರಿ ವ್ಯವಸ್ಥಾಪಕ ಬಿ.ಎಸ್.ಪಾಟೀಲ್, ಬಿಆರ್‌ಪಿ ಪಿ.ಎ.ಬಾಳಿಕಾಯಿ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಬಸರಕೋಡದ ಯುವ ಮುಖಂಡ ಬಸವರಾಜ ಬಿರಾದಾರ, ಸಂಗಮೇಶ ಕಠಾರೆ, ಯರಝರಿಯಲ್ಲಿ ಹುಲ್ಲೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣಾಧಿಕಾರಿ ಬಿ.ವಾಯ್.ಕವಡಿ, ಬಿ.ಆರ್.ಪಿ ರಾಜು ಕೋನರೆಡ್ಡಿ, ಸ್ಥಳೀಯ ಶಾಲೆಯ ಮುಖ್ಯಗುರುಗಳು, ನಿರ್ಣಾಯಕರು ಖೋ ಖೋ ಆಟದಲ್ಲಿ ಬಸರಕೋಡದ ಮಾತೋಶ್ರೀ ಶಿವಲಿಂಗಮ್ಮ ನಾಡಗೌಡರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವಂತ ನಿರ್ಧಾರಗಳನ್ನು ಕೈಗೊಂಡಿದ್ದಾರೆ.ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಆಡಿಸಿದ್ದಲ್ಲದೇ ತಂಡವನ್ನು ಅನರ್ಹಗೊಳಿಸುವ ಬೆದರಿಕೆ ಒಡ್ಡಿದ್ದಾರೆ. ಇದರಿಂದ ಬಸರಕೋಡದ ವಿದ್ಯಾರ್ಥಿಗಳ ಮಾನಸಿಕ ಸ್ಕೈರ್ಯ ಕುಸಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಆಡಿ ಸೋಮು ವಡ್ಡರ, ಬಸವರಾಜ ಮಂಕಣಿ, ಸಂತೋಷ ವಡ್ಡರ, ಮುದಕಪ್ಪ ಮಾದರ, ಶ್ರೀಶೈಲ ಚಲವಾದಿ, ಬಸವರಾಜ ವಡ್ಡೋಡಗಿ ಮೊದಲಾದವರು ಇದ್ದರು.

ವಿದ್ಯಾರ್ಥಿಗಳ ಸಮೇತ ಗ್ರಾಮಸ್ಥರು ನಾಲ್ಕು ತಾಸು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೂ ಸಮೀಪದಲ್ಲಿಯೇ ಇದ್ದ ಬಿಇಒ ಬಿ.ಎಸ್.ಸಾವಳಗಿ ಸ್ಥಳಕ್ಕೆ ಬಂದು ಪ್ರತಿಭಟನಾ ನಿರತರ ಮನವಿ ಆಲಿಸಲಿಲ್ಲ ಎಂದು ಮುಖಂಡ ಬಸವರಾಜ ಬಿರಾದಾರ ದೂರಿದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಯರಝರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಇಬ್ಬರ ದಾಖಲೆಗಳು ಸರಿಯಾಗಿ ಇಲ್ಲದ ಕಾರಣ ಅವರನ್ನು ಫೈನಲ್ ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಬಸರಕೋಡ ಶಾಲೆಯ ವಿದ್ಯಾರ್ಥಿಗಳು ವಿಜೇತರು ಎಂದು ಘೋಷಿಸಿ ಅವರಿಗೆ ತಾಲ್ಲೂಕು ಮಟ್ಟದಲ್ಲಿ ಆಡುವುದಕ್ಕೆ ಅನುಮತಿ ಕಲ್ಪಿಸಲಾಗಿದೆ ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವಾಯ್.ಕವಡಿ ಪತ್ರಿಕೆಗೆ ಹೇಳಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ