Sudden sit-in by Gramam member: Allegedly demanding bribe for payment of Narega wages

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಹುಲ್ಲೂರು ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ತಾಪಂ ಕಚೇರಿ ಮುಂದೆ ಗುರುವಾರ ದಿಢೀರ್ ಧರಣಿ ನಡೆಸಿದರು.

ತಾಪಂ ಕಚೇರಿ ಮುಂದೆ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹುಲ್ಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎಮ್.ಜಿ.ಎನ್.ಆರ್.ಜಿ ಬಿಲ್ ಪಾವತಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜು. 4 ರಂದು ಕಾಮಗಾರಿ ಮುಕ್ತವಾಗಿದ್ದು ಸರಕಾರದ ಸುತ್ತೋಲೆಯಲ್ಲಿ ಕೂಲಿಕಾರ ಬಿಲ್ ಪಾವತಿಸಲು ಕೆಲಸ ಮುಗಿದ ಮೂರು ದಿನಗಳಲ್ಲಿ ಬಿಲ್‌ಪಾವತಿಸಲು ಆದೇಶ ಇದ್ದರೂ ಇಲ್ಲಿನ ಅಧಿಕಾರಿಗಳು ಎಂ.ಐ.ಎಸ್ ಮಾಡಲು ನಿರಾಕರಿಸಿದ್ದಾರೆ ಎಂದು ದೂರಿದರು.

ಈ ಕುರಿತು ತಾಪಂ ಇಒ ಗಮನಕ್ಕೆ ತಂದರೂ ಅವರು ಕೂಲಿಕಾರರ ಕೂಲಿ ಪಾವತಿಗೆ ಸಂಬಂಧಿಸಿದವರಿಗೆ ಸೂಚಿಸದೇ ಮೌನವಾಗಿದ್ದಾರೆ. ಲಂಚ ಕೊಡದಿದ್ದರೆ ಬಿಲ್ ಮಾಡುವುದಿಲ್ಲ. ಯಾರ ಮುಂದೆ ಹೇಳಿಕೊಳ್ಳುತ್ತಿರೋ ಹೇಳಿಕೊಳ್ಳಿ ಎಲ್ಲರಿಗೂ ನಾವು ಲಂಚ ಮುಟ್ಟಿಸುತ್ತೇವೆ ಎಂದು ಹೇಳಿದ್ದು ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಗ್ರಾಪಂ ಸದಸ್ಯ ಶಿವಾನಂದ ಅವರನ್ನು ಭೇಟಿ ಮಾಡಿದ ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ನೀವು ಇಲ್ಲಿ ಪ್ರತಿಭಟನೆ ಮಾಡಿದರೆ ಯಾರೂ ಕೇಳುವುದಿಲ್ಲ. ಜಿಪಂ ಆವರಣದಲ್ಲಿ ಧರಣಿ ಮಾಡಿ ಎಂದು ಬೇಜವಬ್ದಾರಿಯಿಂದ ಉತ್ತರಿಸಿದ್ದಾರೆ ಎಂದು ಆರೋಪಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು