Sudden sit-in by Gramam member: Allegedly demanding bribe for payment of Narega wages

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಗ್ರಾಪಂ ಸದಸ್ಯನಿಂದ ದಿಢೀರ್ ಧರಣಿ: ನರೇಗಾ ಕೂಲಿ ಹಣ ಪಾವತಿಗೆ ಲಂಚಕ್ಕೆ ಬೇಡಿಕೆ ಆರೋಪ

ಮುದ್ದೇಬಿಹಾಳ : ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ 40 ಕೂಲಿಕಾರರು ಕೆಲಸ ಮಾಡಿದ್ದು ಅವರಿಗೆ ಬಿಲ್ ಪಾವತಿಸುವಂತೆ ಕೇಳಿದರೆ ಇಲ್ಲಿನ ತಾಪಂ ಕಚೇರಿಯ ಜೆ.ಇ ಉಮೇಶ ಕನ್ನಿ, ತಾಲ್ಲೂಕ ಸಂಯೋಜಕ ಶಂಕರಗೌಡ ಯಾಳವಾರ ಪರ್ಸೆಂಟೇಜ್‌ಗೆ ಬೇಡಿಕೆ ಇಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದಿದ್ದರೆ ಬಿಲ್ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಹುಲ್ಲೂರು ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ತಾಪಂ ಕಚೇರಿ ಮುಂದೆ ಗುರುವಾರ ದಿಢೀರ್ ಧರಣಿ ನಡೆಸಿದರು.

ತಾಪಂ ಕಚೇರಿ ಮುಂದೆ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹುಲ್ಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎಮ್.ಜಿ.ಎನ್.ಆರ್.ಜಿ ಬಿಲ್ ಪಾವತಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜು. 4 ರಂದು ಕಾಮಗಾರಿ ಮುಕ್ತವಾಗಿದ್ದು ಸರಕಾರದ ಸುತ್ತೋಲೆಯಲ್ಲಿ ಕೂಲಿಕಾರ ಬಿಲ್ ಪಾವತಿಸಲು ಕೆಲಸ ಮುಗಿದ ಮೂರು ದಿನಗಳಲ್ಲಿ ಬಿಲ್‌ಪಾವತಿಸಲು ಆದೇಶ ಇದ್ದರೂ ಇಲ್ಲಿನ ಅಧಿಕಾರಿಗಳು ಎಂ.ಐ.ಎಸ್ ಮಾಡಲು ನಿರಾಕರಿಸಿದ್ದಾರೆ ಎಂದು ದೂರಿದರು.

ಈ ಕುರಿತು ತಾಪಂ ಇಒ ಗಮನಕ್ಕೆ ತಂದರೂ ಅವರು ಕೂಲಿಕಾರರ ಕೂಲಿ ಪಾವತಿಗೆ ಸಂಬಂಧಿಸಿದವರಿಗೆ ಸೂಚಿಸದೇ ಮೌನವಾಗಿದ್ದಾರೆ. ಲಂಚ ಕೊಡದಿದ್ದರೆ ಬಿಲ್ ಮಾಡುವುದಿಲ್ಲ. ಯಾರ ಮುಂದೆ ಹೇಳಿಕೊಳ್ಳುತ್ತಿರೋ ಹೇಳಿಕೊಳ್ಳಿ ಎಲ್ಲರಿಗೂ ನಾವು ಲಂಚ ಮುಟ್ಟಿಸುತ್ತೇವೆ ಎಂದು ಹೇಳಿದ್ದು ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದ ಗ್ರಾಪಂ ಸದಸ್ಯ ಶಿವಾನಂದ ಅವರನ್ನು ಭೇಟಿ ಮಾಡಿದ ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ, ನೀವು ಇಲ್ಲಿ ಪ್ರತಿಭಟನೆ ಮಾಡಿದರೆ ಯಾರೂ ಕೇಳುವುದಿಲ್ಲ. ಜಿಪಂ ಆವರಣದಲ್ಲಿ ಧರಣಿ ಮಾಡಿ ಎಂದು ಬೇಜವಬ್ದಾರಿಯಿಂದ ಉತ್ತರಿಸಿದ್ದಾರೆ ಎಂದು ಆರೋಪಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ