ಮುಧೋಳ : ರೈತರ ಖಾತೆಗೆ ಬಾಕಿ ಹಣ ಜಮಾ ಮಾಡುವಂತೆ ಒತ್ತಾಯಿಸಿ ಸಮೀಪದ ಐಸಿಪಿಎಲ್ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಹಾಗೂ ರೈತರು ಧರಣಿ ಆರಂಭಿಸಿದ್ದಾರೆ.
ಅ.24ರಂದು ನಗರದಲ್ಲಿ ಸಭೆ ಸೇರಿದ್ದ ರೈತರು 26ರೊಳಗೆ 2023ರ ಹಂಗಾಮಿನ ಪ್ರತಿಟನ್ನಿಗೆ ಹೆಚ್ಚುವರಿ 62ರೂ. ನೀಡಬೇಕು ಎಂದು ಎಲ್ಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಗಡುವು ನೀಡಿದ್ದರು. ಆದರೆ ರೈತರ ಗಡುವಿಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳು ಸ್ಪಂದನೆ ನೀಡದ ಕಾರಣ ಶನಿವಾರ ಮತ್ತೆ ಸಭೆ ಸೇರಿದ ರೈತರು ಕಾರ್ಖಾನೆ ನಡೆಯ ವಿರುದ್ದ ಆಕ್ರೋಶ ಹೊರಹಾಕಿದರು. ಬಳಿಕ ಸಕ್ಕರೆ ಕಾರ್ಖಾನೆ ಎದುರು ಧರಣಿ ಕೂರುವ ನಿರ್ಧಾರ ಕೈಗೊಂಡು ನೇರವಾಗಿ ಕಾರ್ಖಾನೆಗೆ ತೆರಳಿದರು.
ಕಾರ್ಖಾನೆ ಎದುರು ಧರಣಿ ಕುಳಿತಿರುವ ರೈತರು ಬಾಕಿ ಬಿಲ್ ಪಾವತಿಗೆ ಒತ್ತಾಯಿಸುತ್ತಿದ್ದಾರೆ.
ರೈತಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ರೈತಮುಖಂಡರಾದ ಹನಮಂತ ನಬಾಬ, ಸುಭಾಷ ಶಿರಬೂರ, ಎ.ಜಿ.ಪಾಟೀಲ ಸೇರಿದಂತೆ ಇತರರು ಇದ್ದರು.

ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ
ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ
Latest News
ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ
ಬಾಗಲಕೋಟೆ: ಎರಡು ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು
ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ
ಬಾಗಲಕೋಟೆ: ಎರಡು ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು
ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ
ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ
ಮುದ್ದೇಬಿಹಾಳ : ಕೆಬಿಜೆಎನ್ಎಲ್ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ
ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ
ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ
ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.
ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ