ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ