ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು