ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ