ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು.

ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದ ರೈತರು ಬಾಕಿ ನೀಡದೆ ಕಾರ್ಖಾನೆ ಆರಂಭಿಸಿದ್ದರ ಕಾರ್ಖಾನೆ ಮಾಲೀಕರ ವಿರುದ್ದ ಹರಿಹಾಯ್ದಿದ್ದರು.

ರೈತ ಸಂಘಟನೆ ಅಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಬ್ಬು ಬಾಕಿ ಹಣ ನೀಡದ ಹೊರತು ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಮೊನ್ನೆ ನಡೆದ ಮಾತುಕಥೆಯಾಗಿತ್ತು. ಅಂದು ಜಿಲ್ಲಾಡಳಿತ 13-14ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದೀಗ ಅಂದಿನ ಮಾತುಕತೆ ಮೀರಿ ಕಾರ್ಖಾನೆಗಳು ಆರಂಭ ಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡೀತ ಮಾತ್ರ ಕೈ ಕಟ್ಟಿ ಕುಳಿತಿದೆ‌. ಬಾಕಿ ನೀಡದೆ ಕಾರ್ಖಾನೆ ಆರಂಭಿಸುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ದಿಕ್ಕುತಪ್ಪಿಸುವ ಸಲುವಾಗಿ ಸಕ್ಕರೆ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ‌
ಚುನಾವಣೆಯಲ್ಲಿರುವ ಜನಪ್ರತಿನಿಧಿಗಳು ರೈತರ ಹೆಸರಿನಲ್ಲಿ‌ ಪ್ರಚಾರ ಮಾಡುತ್ತಾರೆ ಇಲ್ಲಿ ರೈತರ ಬೆನ್ನುಲುಬು ಮುರಿಯುತ್ತಾರೆ ಎಂದು ಹೇಳಿದರು.

ಸುಭಾಸ ಶಿರಬೂರವರು ಮಾತನಾಡಿ, ಕಾರ್ಖಾನೆಗಳ ವಿರುದ್ಧ ಹೋರಾಡಲು‌ ನಮಗೆ ದಾಖಲೆಗಳ ಅಗತ್ಯತೆ ಇದೆ‌. ನಮ್ಮ ಬಳಿಯಿರುವ ದಾಖಲೆಯೊಂದಿಗೆ ಬಾಕಿ ನೀಡದ ಕಾರ್ಖಾನೆ ಮಾಲೀಕರ ವಿರುದ್ದ ಹೋರಾಡಿದಾಗ ಮಾತ್ರ ನಮ್ಮ ಬೇಡಿಕೆ ಈಡೇರಲು ಸಾಧ್ಯ‌. ಈ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.

ಉಪವಿಭಾಗಧಿಕಾರಿ ಬಂದು ಕಾರ್ಖಾನೆ ಪ್ರಾರಂಭಿಸಲು ಕಬ್ಬು ತುಂಬಿಕೊಂಡು ಬಂದಿರುವ ಟ್ರ್ಯಾಕ್ಟರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ನಾವೆ ಹೋಗಿ ಅವುಗಳನ್ನು ತೆರಳುವಗೋಳಿಸುತ್ತೆವೆ ಅಂತಾ ರೈತರು ಪಟ್ಟು ಹಿಡಿದರು.

ಬಾರದ ಎಸಿ ಕಟ್ಟೆಯೊಡೆದ ಆಕ್ರೋಶ : ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸ್ಥಳಕ್ಕೆ ಉಪವಿಭಾಧಿಕಾರಿ ಬಾರದ ಕಾರಣ ರೈತರ ಆಕ್ರೋಶ‌ದ ಕಟ್ಟೆಯೊಡೆದು ಕಾರ್ಖಾನೆಯೊಂದಕ್ಕೆ‌ ನುಗ್ಗಿದರು. ಅಲ್ಲಿನ ಟ್ರ್ಯಾಕ್ಟರ್ ಗಳನ್ನು ಪಲ್ಟಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಆಕ್ರೋಶಕ್ಕೆ ಕಾರಣವಾದ ಜಿಲ್ಲಾಡಳಿತ ನಡೆ : ಮೊನ್ನೆ ತಹಸೀಲ್ದಾರ್ ಕಚೇರಿಯಲ್ಲಿ ಅಹೋರಾತ್ರಿ ನಡೆದ ಪ್ರತಿಭಟನೆ ವೇಳೆ ತಡವಾಗಿ ರೈತರನ್ನು ಭೇಟಿಯಾಗಿದ್ದ ಜಮಖಂಡಿ ಉಪವಿಭಾಗಾಧಿಕಾರಿ 13-14ರಂದು ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ರೈತರೆದುರು ವಾಗ್ದಾನ ಮಾಡಿದ್ದರು. ಆದರೆ ನಿನ್ನೆಯಿಂದ ತಾಲೂಕಿನಲ್ಲಿ ಕೆಲ ಕಾರ್ಖಾನೆಗಳು ಆರಂಭವಾಗಿರುವುದು ರೈತರನ್ನು ಕೆರಳುವಂತೆ ಮಾಡಿತ್ತು. ಇಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾಗಳು ಜಿಲ್ಲಾಧಿಕಾರಿಯಾಗಲಿ ಅಥವಾ ಉಪವಿಭಾಗಾಧಿಕಾರಿಯಾಗಲಿ ರೈತರನ್ನು ಭೇಟಿ‌ ಮಾಡಿ ಮಾತುಕಥೆಗೆ ಮುಂದಾಗಲಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯ ನಡೆಯೇ ರೈತರನ್ನು‌ ಕೆರಳುವಂತೆ ಮಾಡಿತು ಎಂಬ ಮಾತುಗಳು ಹೋರಾಟಗಾರರ ಸ್ಥಳದಿಂದ ಕೇಳಿಬಂದವು.

ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಯಂಕಣ್ಣ ಮಳಲಿ, ಹನಮಂತ ನಬಾಬ, ಹನಮಂತಗೌಡ ಪಾಟೀಲ ಮಹೇಶಗೌಡ ಪಾಟೀಲ, ನಾಗೇಶ ಗೋಲಶೆಟ್ಟಿ ಸೇರಿದಂತೆ ಇತರರು ಇದ್ದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ