Suicide case Man committed suicide by pouring diesel on him self

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಂಚೋಳಿ: ತನ್ನ ‌ಮೈಮೇಲೆ ತಾನೇ ಡೀಸೆಲ್‌ ಅನ್ನು ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide case) ಶರಣಾಗಿರುವ ‌ಹೃದಯವಿದ್ರಾವಕ ದುರ್ಘಟನೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಹೌದು, ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ- ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ಸಂಭವಿಸಿದೆ ಎಂದು ಪಿ.ಎಸ್.ಐ.‌ಗಂಗಮ್ಮ ‌ಮಾಹಿತಿ ನೀಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಆತ್ಮಹತ್ಯೆಗೆ (Suicide case) ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಮಹೇಶ್ ಮಾರುತಿ ಹೆಂಡತಿಯ ತವರು ‌ಮನೆಯಲ್ಲಿ ಹೆಂಡತಿ ‌ಮಕ್ಕಳೊಂದಿಗೆ‌ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಹಿಂದೊಮ್ಮೆ ಆತ ಆತ್ಮಹತ್ಯೆ (Suicide case) ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಚಿಂಚೋಳಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ಮೃತಪಟ್ಟ ಮಹೇಶ್, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Mudhol: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ