ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

ಹೋರಾಟದ ಪರಿಣಾಮ ಮೀಸಲಾತಿ ಪರವಾಗಿ ತೀರ್ಪು: ಉಡಚಪ್ಪ ಮಳಗಿ

Ad
Ad

ಹಾವೇರಿ: ಡಾ.ಬಾಬಾಸಾಹೇಬ ಅಂಬೇಡ್ಕರ್ ಆಶಯದಂತೆ ಸಂವಿಧಾನ ಬದ್ಧವಾಗಿ, ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 30 ವರ್ಷಗಳಿಂದ ನಿರಂತರ, ಜಿಲ್ಲಾ, ರಾಜ್ಯ ಮಟ್ಟದ ಸಂವಾದ, ಚರ್ಚಾಕೂಟ, ಸಮಾವೇಶ, ಮುತ್ತಿಗೆ, ಹಲವಾರು ರೀತಿ ಜನಪರ ಹೋರಾಟ ಹಾಗೂ ನ್ಯಾಯಾಲಯದ ಹೋರಾಟಕ್ಕೆ ರಾಷ್ಟ್ರೀಯ ವಿಷಯವಾಗಿ ಚಳುವಳಿ ಮಾಡಿದ ಪರಿಣಾಮ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ಬಂದಿದೆ ಎಂದು ಉಡಚಪ್ಪ ಮಳಗಿ ಹರ್ಷ ವ್ಯಕ್ತಪಡಿದರು.

Ad
Ad

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ವತಿಯಿಂದ ದೇಶದ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ ಪೀಠದಲ್ಲಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದನ್ನು ಸ್ವಾಗತಿಸಿ ಸಿಹಿ ಹಂಚಿ ಡಿ ಎಸ್ ಎಸ್ ರಾಜ್ಯ ಸದಸ್ಯರು ಉಡಚಪ್ಪ ಮಾಳಗಿಮಾತನಾಡಿದರು.

ಇಂತಹ ಐತಿಹಾಸಿಕ ತೀರ್ಪು ನೀಡಿದ ಸಂವಿಧಾನ ಪೀಠದ 7ಜನ ನ್ಯಾಯಾಧೀಶರಿಗೆ, ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ಸಂಘಟನೆಗಳಿಗೆ, ಜನಪರ ಚಳುವಳಿಯಲ್ಲಿ ಭಾಗವಹಿಸಿದ ದಲಿತ ಚಳುವಳಿ ಹಾಗೂ ಇನ್ನಿತರ ಸಾಮಾಜಿಕ ಪರಿವರ್ತನೆಯ ಸಂಘಟನೆಗಳ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ,ಎಂ ಆಂಜನೇಯ ಮಂಜಪ್ಪ ಮಾರೋಳ, ವೈ.ಎನ್.ಮಾಸೂರ, ಜಗದೀಶ್ ಹರಿಜನ, ಶಿವು ಮುದಿಮಲ್ಲಣ್ಣವರ, ರೇಣುಕಾ ಬಡಕಣ್ಣವರ, ಮಂಜುನಾಥ್ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಬಸವಣ್ಣಪ್ಪ ಅರಳಿಹಳ್ಳಿ, ಶಂಭುಲಿಂಗಪ್ಪ ದಿವಟರ, ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ, ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ, ರತ್ನವ್ವ ದೊಡ್ಡಮನಿ ಇತರರು ಇದ್ದರು.

Latest News

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮುದ್ದೇಬಿಹಾಳ : ತಮ್ಮ ಪುತ್ರ ಕಿರಣ ಮದರಿ ಅವರ ಕಲ್ಯಾಣ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮೇ.18 ರಂದು ಆಯೋಜಿಸಲಾಗಿದ್ದು ಆಸಕ್ತ ವಧು ವರರು ತಮ್ಮ ಹೆಸರುಗಳನ್ನು ನೋಂದಾಯಿಸಲು ಕಲ್ಯಾಣ ಮಹೋತ್ಸವ ಸಮೀತಿ ಸಂಚಾಲಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್. ಮದರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪ್ರಥಮ ದರ್ಜೆ ಗುತ್ತಿಗೆದಾರರೂ ಆಗಿರುವ ಎಂ. ಎನ್. ಮದರಿ ಅವರು, ಉಳ್ಳವರ ಮದುವೆಗಳು ದುಂದುವೆಚ್ಚದಿಂದ

ನಾಗರಬೆಟ್ಟ : ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.99.46 ಫಲಿತಾಂಶ

ನಾಗರಬೆಟ್ಟ : ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.99.46 ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಗುಡ್ಡದ ಬಳಿ ಇರುವ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.99.46 ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ 1120 ವಿದ್ಯಾರ್ಥಿಗಳಲ್ಲಿ 1114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪಿಸಿಎಂಬಿ ವಿಭಾಗದಲ್ಲಿ 501 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ವಜ್ರಾ ಆಚಾರಿ ಶೇ.97.5 ಪ್ರಥಮ, ಸಾನಿಕಾ ಘೂಳಣ್ಣವರ ಶೇ.97.16 ದ್ವಿತೀಯ, ಸಂಪತ್ತಕುಮಾರ ಹುಗ್ಗಿ, ಸ್ನೇಹಾ