Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ


ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು.

Join Our Telegram: https://t.me/dcgkannada
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ (Swachcha Bharath Abhiyan) ಚಾಲನೆ ನೀಡಿ ಅವರು ಮಾತನಾಡಿದರು.

ಬಸ್ ನಿಲ್ದಾಣ ನಮ್ಮ ಆಸ್ತಿ ಎಂಬುದು ಸಾರ್ವಜನಿಕರು ಅರಿತುಕೊಳ್ಳಬೇಕಿದೆ. ನಿಲ್ದಾಣದ ಕಂಬಗಳಿಗೆ ಎಲ್ಲೆಂದರಲ್ಲಿ ಭಿತ್ತಿಪತ್ರ ಅಂಟಿಸಿ ನಿಲ್ದಾಣದ ಅಂದವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ: ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ


ಯುವ ಮುಖಂಡ ಉದಯ ರಾಯಚೂರ ಮಾತನಾಡಿ, ಸಾರಿಗೆ ಇಲಾಖೆಯ ಸಿಬ್ಬಂದಿಯೇ ಬಸ್ ನಿಲ್ದಾಣದ ಸ್ವಚ್ಛತೆ ಕೈಗೊಂಡಿರುವುದಕ್ಕೆ ಸಾರ್ವಜನಿಕರ ಪರವಾಗಿ ಧನ್ಯವಾದ ಹೇಳುತ್ತೇವೆ.ನಿಲ್ದಾಣಕ್ಕೆ ಬರುವವರು ಎಲ್ಲೆಂದರಲ್ಲಿ ಗುಟ್ಖಾ ಅಗೆದು ಉಗಿಯುವುದು, ಎಲ್ಲೆಂದರಲ್ಲಿ ಬಹಿರ್ದೆಸೆ, ಮೂತ್ರ ವಿಸರ್ಜನೆ ಮಾಡುವುದನ್ನು ಮಾಡಬಾರದು. ನಿಲ್ದಾಣದ ಸ್ವಚ್ಛತೆಗೆ ಯುವಕರು ಕೈಜೋಡಿಸಬೇಕು ಎಂದರು.


ಘಟಕದ ಎಡಿಎಂ ಸೂಪರವೈಸರ್ ಎಸ್.ಬಿ.ಪಾಟೀಲ್, ಎನ್.ಎಸ್.ಮಠ, ಬಸವರಾಜ ಬಿರಾದಾರ,ಎಸ್.ಡಿ.ಪತ್ತಾರ, ಎಸ್.ಎಂ.ಹೊಳಿ, ಎಸ್.ಆರ್.ಮುಲ್ಲಾ ಹಾಗೂ ಆಡಳಿತ ವರ್ಗ, ತಾಂತ್ರಿಕ ಸಿಬ್ಬಂದಿ, ಚಾಲಕ ನಿರ್ವಾಹಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ