42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಅಶ್ಲೀಲತೆಯ ಸೋಂಕಿಲ್ಲದoತೆ ಪ್ರದರ್ಶನ ನೀಡಲು ತಾಕೀತು ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಹಾಗೂ ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಇತರೆ ಸಂಘಟನೆಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್ ಆವರಣದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ಜ.31 ರಂದು ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.

ಖಾಸ್ಗತೇಶ್ವರ ಮಠದಿಂದ ಮದ್ಯಾಹ್ನ 3ಕ್ಕೆ ಸ್ವಾಮಿವಿವೇಕಾನಂದರ ಭಾವಚಿತ್ರದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ದುರ್ಗಾದೇವಿ ಉಪಾಸಕ ಲಾಲ್‌ಲಿಂಗೇಶ್ವರ ಶರಣರು,ಮಾವಿನಭಾವಿಯ ಬಸವರಾಜ ಗುರೂಜಿ,ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಸೇರಿದಂತೆ ಹಲವರು ಆಗಮಿಸುವರು.

ಸಂಜೆ 5ಕ್ಕೆ ಸ್ವಾಮಿ ವಿವೇಕಾನಂದರ ರಾಜ್ಯ, ರಾಷ್ಟç ಮತ್ತು ಅoತರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ರಾಷ್ಟ್ರೀಯ ಯುವ ವೈಭವ, ವಿವೇಕ ಯುವ ಚೈತನ್ಯ ಕೃತಿ ಹಾಗೂ ಧರ್ಮ ಯುದ್ಧ ದಿನದರ್ಶಿಕೆ ಲೋಕಾರ್ಪಣಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ದಿವ್ಯ ಸಾನಿಧ್ಯ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಅಕ್ಕಮಹಾದೇವಿ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ರಮೇಶ ಎಂ.ಸಿ. ಪ್ರಶಸ್ತಿ ಪ್ರದಾನ ಮಾಡುವರು.ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಅಧ್ಯಕ್ಷತೆ ವಹಿಸುವರು.

ಪ್ರಮುಖರಾದ ಎಂ.ಎನ್.ನಟರಾಜನ್, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಬಾಲಾಜಿ ಶುರ‍್ಸ್ನ ಅಧೀಕ ಪಾಟೀಲ, ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ , ಸಮಾಜ ಸೇವಕಿ ಸಂಗೀತಾ ನಾಡಗೌಡ,ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಸಮಾಜ ಸೇವಕ ನೇತಾಜಿ ನಲವಡೆ ಆಗಮಿಸುವರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಲು ಯುವನೀತಿ ಜಾರಿಗೆ ಒತ್ತಾಯಿಸಲಾಗುತ್ತ ಬರುತ್ತಿದೆ.ರಾಜ್ಯದಲ್ಲೂ ಯುವ ನೀತಿ ಜಾರಿಗೆ ತರಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ಸಂಗಣ್ಣ ಕಂಚ್ಯಾಣಿ, ಚಂದ್ರು ಕರೇಕಲ್,ಬಸವರಾಜ ದಡ್ಡಿ,ಸಾಬಣ್ಣ ಚಳ್ಳಗಿ, ವಿರೇಶ ಗುರುಮಠ, ಅಪ್ಪುಗೌಡ ಪಾಟೀಲ, ಮಹ್ಮದರಫೀಕ ಶಿರೋಲ,ಮಹಾಂತೇಶ ಬಿಜ್ಜೂರ, ಕೃಷ್ಣಾ ಕುಂಬಾರ, ದೀಪರತ್ನಶ್ರೀ, ರಾಜು ವಾಲೀಕಾರ, ಬಸವರಾಜ ಯಂಕoಚಿ, ಚಂದ್ರು ಮೂಕಿಹಾಳ ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ