42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಅಶ್ಲೀಲತೆಯ ಸೋಂಕಿಲ್ಲದoತೆ ಪ್ರದರ್ಶನ ನೀಡಲು ತಾಕೀತು ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಹಾಗೂ ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಇತರೆ ಸಂಘಟನೆಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಅಂಗವಾಗಿ ಮುದ್ದೇಬಿಹಾಳ ಪಟ್ಟಣದ ವಿಬಿಸಿ ಹೈಸ್ಕೂಲ್ ಆವರಣದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ಜ.31 ರಂದು ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ.

ಖಾಸ್ಗತೇಶ್ವರ ಮಠದಿಂದ ಮದ್ಯಾಹ್ನ 3ಕ್ಕೆ ಸ್ವಾಮಿವಿವೇಕಾನಂದರ ಭಾವಚಿತ್ರದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ದುರ್ಗಾದೇವಿ ಉಪಾಸಕ ಲಾಲ್‌ಲಿಂಗೇಶ್ವರ ಶರಣರು,ಮಾವಿನಭಾವಿಯ ಬಸವರಾಜ ಗುರೂಜಿ,ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಸೇರಿದಂತೆ ಹಲವರು ಆಗಮಿಸುವರು.

ಸಂಜೆ 5ಕ್ಕೆ ಸ್ವಾಮಿ ವಿವೇಕಾನಂದರ ರಾಜ್ಯ, ರಾಷ್ಟç ಮತ್ತು ಅoತರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ರಾಷ್ಟ್ರೀಯ ಯುವ ವೈಭವ, ವಿವೇಕ ಯುವ ಚೈತನ್ಯ ಕೃತಿ ಹಾಗೂ ಧರ್ಮ ಯುದ್ಧ ದಿನದರ್ಶಿಕೆ ಲೋಕಾರ್ಪಣಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ದಿವ್ಯ ಸಾನಿಧ್ಯ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಅಕ್ಕಮಹಾದೇವಿ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ರಮೇಶ ಎಂ.ಸಿ. ಪ್ರಶಸ್ತಿ ಪ್ರದಾನ ಮಾಡುವರು.ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಲಾಜಿ ಅಧ್ಯಕ್ಷತೆ ವಹಿಸುವರು.

ಪ್ರಮುಖರಾದ ಎಂ.ಎನ್.ನಟರಾಜನ್, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಬಾಲಾಜಿ ಶುರ‍್ಸ್ನ ಅಧೀಕ ಪಾಟೀಲ, ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ , ಸಮಾಜ ಸೇವಕಿ ಸಂಗೀತಾ ನಾಡಗೌಡ,ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಸಮಾಜ ಸೇವಕ ನೇತಾಜಿ ನಲವಡೆ ಆಗಮಿಸುವರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಲು ಯುವನೀತಿ ಜಾರಿಗೆ ಒತ್ತಾಯಿಸಲಾಗುತ್ತ ಬರುತ್ತಿದೆ.ರಾಜ್ಯದಲ್ಲೂ ಯುವ ನೀತಿ ಜಾರಿಗೆ ತರಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಸಂಘಗಳ ಒಕ್ಕೂಟದ ಪದಾಧಿಕಾರಿಗಳಾದ ಸಂಗಣ್ಣ ಕಂಚ್ಯಾಣಿ, ಚಂದ್ರು ಕರೇಕಲ್,ಬಸವರಾಜ ದಡ್ಡಿ,ಸಾಬಣ್ಣ ಚಳ್ಳಗಿ, ವಿರೇಶ ಗುರುಮಠ, ಅಪ್ಪುಗೌಡ ಪಾಟೀಲ, ಮಹ್ಮದರಫೀಕ ಶಿರೋಲ,ಮಹಾಂತೇಶ ಬಿಜ್ಜೂರ, ಕೃಷ್ಣಾ ಕುಂಬಾರ, ದೀಪರತ್ನಶ್ರೀ, ರಾಜು ವಾಲೀಕಾರ, ಬಸವರಾಜ ಯಂಕoಚಿ, ಚಂದ್ರು ಮೂಕಿಹಾಳ ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,