ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು