ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು