ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ