ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ