Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Ad
Ad

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು.

Ad
Ad

ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ.. ಎರಡಲ್ಲ.. ಬರೋಬ್ಬರಿ 10 ಸಿಕ್ಸರ್​ಗಳು! ಇಡೀ ತಂಡದ್ದಲ್ಲ.. ಒಬ್ಬನೇ ಒಬ್ಬ ಸಿಡಿಸಿದ ಸಿಕ್ಸರ್​ಗಳಿವು!

ನಿನ್ನೆ ನಡೆದ ಸೌತ್​ ಆಫ್ರಿಕಾ ವಿರುದ್ಧದ T20 Matchನಲ್ಲಿ ಟಾಸ್​​ ಸೋತು ಬ್ಯಾಟಿಂಗ್​ಗಿಳಿದ ಟೀಮ್​ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಂಡಿತು. ಓಪನರ್​ ಅಭಿಶೇಕ್​ ಶರ್ಮಾ 7 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕ್ರಿಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಅಬ್ಬರಿಸಿ ಮರೆಯಾದರು. 1 ಸಿಕ್ಸರ್​​, 2 ಬೌಂಡರಿ ಸಿಡಿಸಿದ ಸೂರ್ಯ 21 ರನ್​ಗಳಿಸಿ ನಿರ್ಗಮಿಸಿದರು.

ಒಂದೆಡೆ ವಿಕೆಟ್​ ಉರುಳ್ತಾ ಇದ್ರೆ, ಇನ್ನೊಂದೆಡೆ ಸೈಲೆಂಟ್ ಸ್ಟಾರ್​​ ಸಂಜು (Sanju Samson) ಫುಲ್​ ವೈಲೆಂಟ್​ ಆಗಿದ್ದರು. ಸೌತ್​ ಆಫ್ರಿಕಾ ಬೌಲರ್​​ಗಳ ಬೆಂಡೆತ್ತಿದ ಸಂಜು, ಸಿಕ್ಸರ್​ಗಳ ಮಳೆ ಸುರಿಸಿದರು. ಸಂಜು ಸ್ಯಾಮ್ಸನ್​ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳ ಬಳಿ ಆನ್ಸರೇ ಇರಲಿಲ್ಲ. ಕ್ಯಾಪ್ಟನ್​ ಮರ್ಕರಮ್​ಗೆ ಫೀಲ್ಡ್​ ಪ್ಲೇಸ್​ಮೆಂಟ್​ ಮಾಡೋ ಟೆನ್ಶನ್​​ ಅನ್ನೋದು ಬರೆಲೇ ಇಲ್ಲ. ಸಂಜು ಹೊಡೆದ ಶಾಟ್ಸ್​​ಗಳು ಎಲ್ಲಾ ಬೌಂಡರಿಯಾಚೆ ಹೋಗುತ್ತಿದ್ದವು.

ಡರ್ಬನ್​ನ T20 Matchನಲ್ಲಿ 10 ಸಿಕ್ಸರ್​ ಸಿಡಿಸಿ ಮಿಂಚಿದ ಸಂಜು (Sanju Samson) ಸ್ಯಾಮ್ಸನ್​ 7 ಕ್ಲಾಸಿಕ್​ ಬೌಂಡರಿಗಳನ್ನೂ ಚಚ್ಚಿದ್ರು. ಬರೋಬ್ಬರಿ 214ರ ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್​ ಬೀಸಿದ ಸ್ಯಾಮ್ಸನ್​ 47 ಎಸೆತಗಳಲ್ಲೇ ಸೆಂಚುರಿ ಸಿಡಿಸಿ ಮಿಂಚಿದರು.

ಸಂಜು ಸ್ಯಾಮ್ಸನ್​ಗೆ ಸಾಥ್​ ಕೊಟ್ಟ ತಿಲಕ್​ ವರ್ಮಾ 18 ಎಸೆತಗಳಲ್ಲೇ 33 ರನ್​ ಚಚ್ಚಿದ್ರು. 3 ಬೌಂಡರಿ, 2 ಸಿಕ್ಸರ್​ಗಳನ್ನ ಬಾರಿಸಿದರು. 33 ರನ್​ಗಳಿಸಿ ತಿಲಕ್​ ವರ್ಮಾ ಔಟಾದರೆ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ವಿಕೆಟ್​ ಒಪ್ಪಿಸಿದರು. ಇದ್ರೊಂದಿಗೆ ಟೀಮ್​ ಇಂಡಿಯಾ ಕುಸಿತ ಆರಂಭವಾಯ್ತು.

ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಕ್ಷರ್​ ಪಟೇಲ್​ ಅಲ್ಪ ಮೊತ್ತಕ್ಕೆ ಔಟಾದರು. ಪರಿಣಾಮ ಟೀಮ್​ ಇಂಡಿಯಾ ಕೊನೆಯ 6 ಓವರ್​ಗಳಲ್ಲಿ ಕೇವಲ 40 ರನ್​ಗಳಿಸಿತು. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 202 ರನ್​ ಕಲೆ ಹಾಕಿತು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500