Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು.

ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ.. ಎರಡಲ್ಲ.. ಬರೋಬ್ಬರಿ 10 ಸಿಕ್ಸರ್​ಗಳು! ಇಡೀ ತಂಡದ್ದಲ್ಲ.. ಒಬ್ಬನೇ ಒಬ್ಬ ಸಿಡಿಸಿದ ಸಿಕ್ಸರ್​ಗಳಿವು!

ನಿನ್ನೆ ನಡೆದ ಸೌತ್​ ಆಫ್ರಿಕಾ ವಿರುದ್ಧದ T20 Matchನಲ್ಲಿ ಟಾಸ್​​ ಸೋತು ಬ್ಯಾಟಿಂಗ್​ಗಿಳಿದ ಟೀಮ್​ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಂಡಿತು. ಓಪನರ್​ ಅಭಿಶೇಕ್​ ಶರ್ಮಾ 7 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕ್ರಿಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಅಬ್ಬರಿಸಿ ಮರೆಯಾದರು. 1 ಸಿಕ್ಸರ್​​, 2 ಬೌಂಡರಿ ಸಿಡಿಸಿದ ಸೂರ್ಯ 21 ರನ್​ಗಳಿಸಿ ನಿರ್ಗಮಿಸಿದರು.

ಒಂದೆಡೆ ವಿಕೆಟ್​ ಉರುಳ್ತಾ ಇದ್ರೆ, ಇನ್ನೊಂದೆಡೆ ಸೈಲೆಂಟ್ ಸ್ಟಾರ್​​ ಸಂಜು (Sanju Samson) ಫುಲ್​ ವೈಲೆಂಟ್​ ಆಗಿದ್ದರು. ಸೌತ್​ ಆಫ್ರಿಕಾ ಬೌಲರ್​​ಗಳ ಬೆಂಡೆತ್ತಿದ ಸಂಜು, ಸಿಕ್ಸರ್​ಗಳ ಮಳೆ ಸುರಿಸಿದರು. ಸಂಜು ಸ್ಯಾಮ್ಸನ್​ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳ ಬಳಿ ಆನ್ಸರೇ ಇರಲಿಲ್ಲ. ಕ್ಯಾಪ್ಟನ್​ ಮರ್ಕರಮ್​ಗೆ ಫೀಲ್ಡ್​ ಪ್ಲೇಸ್​ಮೆಂಟ್​ ಮಾಡೋ ಟೆನ್ಶನ್​​ ಅನ್ನೋದು ಬರೆಲೇ ಇಲ್ಲ. ಸಂಜು ಹೊಡೆದ ಶಾಟ್ಸ್​​ಗಳು ಎಲ್ಲಾ ಬೌಂಡರಿಯಾಚೆ ಹೋಗುತ್ತಿದ್ದವು.

ಡರ್ಬನ್​ನ T20 Matchನಲ್ಲಿ 10 ಸಿಕ್ಸರ್​ ಸಿಡಿಸಿ ಮಿಂಚಿದ ಸಂಜು (Sanju Samson) ಸ್ಯಾಮ್ಸನ್​ 7 ಕ್ಲಾಸಿಕ್​ ಬೌಂಡರಿಗಳನ್ನೂ ಚಚ್ಚಿದ್ರು. ಬರೋಬ್ಬರಿ 214ರ ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್​ ಬೀಸಿದ ಸ್ಯಾಮ್ಸನ್​ 47 ಎಸೆತಗಳಲ್ಲೇ ಸೆಂಚುರಿ ಸಿಡಿಸಿ ಮಿಂಚಿದರು.

ಸಂಜು ಸ್ಯಾಮ್ಸನ್​ಗೆ ಸಾಥ್​ ಕೊಟ್ಟ ತಿಲಕ್​ ವರ್ಮಾ 18 ಎಸೆತಗಳಲ್ಲೇ 33 ರನ್​ ಚಚ್ಚಿದ್ರು. 3 ಬೌಂಡರಿ, 2 ಸಿಕ್ಸರ್​ಗಳನ್ನ ಬಾರಿಸಿದರು. 33 ರನ್​ಗಳಿಸಿ ತಿಲಕ್​ ವರ್ಮಾ ಔಟಾದರೆ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ವಿಕೆಟ್​ ಒಪ್ಪಿಸಿದರು. ಇದ್ರೊಂದಿಗೆ ಟೀಮ್​ ಇಂಡಿಯಾ ಕುಸಿತ ಆರಂಭವಾಯ್ತು.

ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಕ್ಷರ್​ ಪಟೇಲ್​ ಅಲ್ಪ ಮೊತ್ತಕ್ಕೆ ಔಟಾದರು. ಪರಿಣಾಮ ಟೀಮ್​ ಇಂಡಿಯಾ ಕೊನೆಯ 6 ಓವರ್​ಗಳಲ್ಲಿ ಕೇವಲ 40 ರನ್​ಗಳಿಸಿತು. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 202 ರನ್​ ಕಲೆ ಹಾಕಿತು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ