Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು.

ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ.. ಎರಡಲ್ಲ.. ಬರೋಬ್ಬರಿ 10 ಸಿಕ್ಸರ್​ಗಳು! ಇಡೀ ತಂಡದ್ದಲ್ಲ.. ಒಬ್ಬನೇ ಒಬ್ಬ ಸಿಡಿಸಿದ ಸಿಕ್ಸರ್​ಗಳಿವು!

ನಿನ್ನೆ ನಡೆದ ಸೌತ್​ ಆಫ್ರಿಕಾ ವಿರುದ್ಧದ T20 Matchನಲ್ಲಿ ಟಾಸ್​​ ಸೋತು ಬ್ಯಾಟಿಂಗ್​ಗಿಳಿದ ಟೀಮ್​ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಂಡಿತು. ಓಪನರ್​ ಅಭಿಶೇಕ್​ ಶರ್ಮಾ 7 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕ್ರಿಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಅಬ್ಬರಿಸಿ ಮರೆಯಾದರು. 1 ಸಿಕ್ಸರ್​​, 2 ಬೌಂಡರಿ ಸಿಡಿಸಿದ ಸೂರ್ಯ 21 ರನ್​ಗಳಿಸಿ ನಿರ್ಗಮಿಸಿದರು.

ಒಂದೆಡೆ ವಿಕೆಟ್​ ಉರುಳ್ತಾ ಇದ್ರೆ, ಇನ್ನೊಂದೆಡೆ ಸೈಲೆಂಟ್ ಸ್ಟಾರ್​​ ಸಂಜು (Sanju Samson) ಫುಲ್​ ವೈಲೆಂಟ್​ ಆಗಿದ್ದರು. ಸೌತ್​ ಆಫ್ರಿಕಾ ಬೌಲರ್​​ಗಳ ಬೆಂಡೆತ್ತಿದ ಸಂಜು, ಸಿಕ್ಸರ್​ಗಳ ಮಳೆ ಸುರಿಸಿದರು. ಸಂಜು ಸ್ಯಾಮ್ಸನ್​ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳ ಬಳಿ ಆನ್ಸರೇ ಇರಲಿಲ್ಲ. ಕ್ಯಾಪ್ಟನ್​ ಮರ್ಕರಮ್​ಗೆ ಫೀಲ್ಡ್​ ಪ್ಲೇಸ್​ಮೆಂಟ್​ ಮಾಡೋ ಟೆನ್ಶನ್​​ ಅನ್ನೋದು ಬರೆಲೇ ಇಲ್ಲ. ಸಂಜು ಹೊಡೆದ ಶಾಟ್ಸ್​​ಗಳು ಎಲ್ಲಾ ಬೌಂಡರಿಯಾಚೆ ಹೋಗುತ್ತಿದ್ದವು.

ಡರ್ಬನ್​ನ T20 Matchನಲ್ಲಿ 10 ಸಿಕ್ಸರ್​ ಸಿಡಿಸಿ ಮಿಂಚಿದ ಸಂಜು (Sanju Samson) ಸ್ಯಾಮ್ಸನ್​ 7 ಕ್ಲಾಸಿಕ್​ ಬೌಂಡರಿಗಳನ್ನೂ ಚಚ್ಚಿದ್ರು. ಬರೋಬ್ಬರಿ 214ರ ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್​ ಬೀಸಿದ ಸ್ಯಾಮ್ಸನ್​ 47 ಎಸೆತಗಳಲ್ಲೇ ಸೆಂಚುರಿ ಸಿಡಿಸಿ ಮಿಂಚಿದರು.

ಸಂಜು ಸ್ಯಾಮ್ಸನ್​ಗೆ ಸಾಥ್​ ಕೊಟ್ಟ ತಿಲಕ್​ ವರ್ಮಾ 18 ಎಸೆತಗಳಲ್ಲೇ 33 ರನ್​ ಚಚ್ಚಿದ್ರು. 3 ಬೌಂಡರಿ, 2 ಸಿಕ್ಸರ್​ಗಳನ್ನ ಬಾರಿಸಿದರು. 33 ರನ್​ಗಳಿಸಿ ತಿಲಕ್​ ವರ್ಮಾ ಔಟಾದರೆ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ವಿಕೆಟ್​ ಒಪ್ಪಿಸಿದರು. ಇದ್ರೊಂದಿಗೆ ಟೀಮ್​ ಇಂಡಿಯಾ ಕುಸಿತ ಆರಂಭವಾಯ್ತು.

ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಕ್ಷರ್​ ಪಟೇಲ್​ ಅಲ್ಪ ಮೊತ್ತಕ್ಕೆ ಔಟಾದರು. ಪರಿಣಾಮ ಟೀಮ್​ ಇಂಡಿಯಾ ಕೊನೆಯ 6 ಓವರ್​ಗಳಲ್ಲಿ ಕೇವಲ 40 ರನ್​ಗಳಿಸಿತು. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 202 ರನ್​ ಕಲೆ ಹಾಕಿತು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ