Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು.

ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ.. ಎರಡಲ್ಲ.. ಬರೋಬ್ಬರಿ 10 ಸಿಕ್ಸರ್​ಗಳು! ಇಡೀ ತಂಡದ್ದಲ್ಲ.. ಒಬ್ಬನೇ ಒಬ್ಬ ಸಿಡಿಸಿದ ಸಿಕ್ಸರ್​ಗಳಿವು!

ನಿನ್ನೆ ನಡೆದ ಸೌತ್​ ಆಫ್ರಿಕಾ ವಿರುದ್ಧದ T20 Matchನಲ್ಲಿ ಟಾಸ್​​ ಸೋತು ಬ್ಯಾಟಿಂಗ್​ಗಿಳಿದ ಟೀಮ್​ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಂಡಿತು. ಓಪನರ್​ ಅಭಿಶೇಕ್​ ಶರ್ಮಾ 7 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕ್ರಿಸ್​ಗೆ ಬಂದ ಸೂರ್ಯಕುಮಾರ್​ ಯಾದವ್​ ಅಬ್ಬರಿಸಿ ಮರೆಯಾದರು. 1 ಸಿಕ್ಸರ್​​, 2 ಬೌಂಡರಿ ಸಿಡಿಸಿದ ಸೂರ್ಯ 21 ರನ್​ಗಳಿಸಿ ನಿರ್ಗಮಿಸಿದರು.

ಒಂದೆಡೆ ವಿಕೆಟ್​ ಉರುಳ್ತಾ ಇದ್ರೆ, ಇನ್ನೊಂದೆಡೆ ಸೈಲೆಂಟ್ ಸ್ಟಾರ್​​ ಸಂಜು (Sanju Samson) ಫುಲ್​ ವೈಲೆಂಟ್​ ಆಗಿದ್ದರು. ಸೌತ್​ ಆಫ್ರಿಕಾ ಬೌಲರ್​​ಗಳ ಬೆಂಡೆತ್ತಿದ ಸಂಜು, ಸಿಕ್ಸರ್​ಗಳ ಮಳೆ ಸುರಿಸಿದರು. ಸಂಜು ಸ್ಯಾಮ್ಸನ್​ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳ ಬಳಿ ಆನ್ಸರೇ ಇರಲಿಲ್ಲ. ಕ್ಯಾಪ್ಟನ್​ ಮರ್ಕರಮ್​ಗೆ ಫೀಲ್ಡ್​ ಪ್ಲೇಸ್​ಮೆಂಟ್​ ಮಾಡೋ ಟೆನ್ಶನ್​​ ಅನ್ನೋದು ಬರೆಲೇ ಇಲ್ಲ. ಸಂಜು ಹೊಡೆದ ಶಾಟ್ಸ್​​ಗಳು ಎಲ್ಲಾ ಬೌಂಡರಿಯಾಚೆ ಹೋಗುತ್ತಿದ್ದವು.

ಡರ್ಬನ್​ನ T20 Matchನಲ್ಲಿ 10 ಸಿಕ್ಸರ್​ ಸಿಡಿಸಿ ಮಿಂಚಿದ ಸಂಜು (Sanju Samson) ಸ್ಯಾಮ್ಸನ್​ 7 ಕ್ಲಾಸಿಕ್​ ಬೌಂಡರಿಗಳನ್ನೂ ಚಚ್ಚಿದ್ರು. ಬರೋಬ್ಬರಿ 214ರ ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್​ ಬೀಸಿದ ಸ್ಯಾಮ್ಸನ್​ 47 ಎಸೆತಗಳಲ್ಲೇ ಸೆಂಚುರಿ ಸಿಡಿಸಿ ಮಿಂಚಿದರು.

ಸಂಜು ಸ್ಯಾಮ್ಸನ್​ಗೆ ಸಾಥ್​ ಕೊಟ್ಟ ತಿಲಕ್​ ವರ್ಮಾ 18 ಎಸೆತಗಳಲ್ಲೇ 33 ರನ್​ ಚಚ್ಚಿದ್ರು. 3 ಬೌಂಡರಿ, 2 ಸಿಕ್ಸರ್​ಗಳನ್ನ ಬಾರಿಸಿದರು. 33 ರನ್​ಗಳಿಸಿ ತಿಲಕ್​ ವರ್ಮಾ ಔಟಾದರೆ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್​ ವಿಕೆಟ್​ ಒಪ್ಪಿಸಿದರು. ಇದ್ರೊಂದಿಗೆ ಟೀಮ್​ ಇಂಡಿಯಾ ಕುಸಿತ ಆರಂಭವಾಯ್ತು.

ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ಅಕ್ಷರ್​ ಪಟೇಲ್​ ಅಲ್ಪ ಮೊತ್ತಕ್ಕೆ ಔಟಾದರು. ಪರಿಣಾಮ ಟೀಮ್​ ಇಂಡಿಯಾ ಕೊನೆಯ 6 ಓವರ್​ಗಳಲ್ಲಿ ಕೇವಲ 40 ರನ್​ಗಳಿಸಿತು. ಅಂತಿಮವಾಗಿ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 202 ರನ್​ ಕಲೆ ಹಾಕಿತು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ