Tagaru who won the competition and got on the bike

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಕುಷ್ಟಗಿ : ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಕುಷ್ಟಗಿ ಟಗರು ಸೆಣಸಾಡಿ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಹೊಸ ಬೈಕ್ ಗೆದ್ದುಕೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶ್ರಾವಣ ಮಾಸದ ನಿಮಿತ್ತ ಕುಂಬಳಾವತಿ ಗ್ರಾಮದ ಶ್ರೀದ್ಯಾಮಾಂಭಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಟಗರಿನ ಕಾಳಗ ಓಪನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಕಡೆಯಿಂದ 8 ಹಲ್ಲಿನ 40ಕ್ಕೂ ಹೆಚ್ಚು ಟಗರುಗಳು ಭಾಗವಹಿಸಿದ್ದವು.

4 ಸುತ್ತುಗಳ ಈ ಸ್ಪರ್ಧೆಯಲ್ಲಿ ಬಲಾಢ್ಯ ಎದುರಾಳಿ ಟಗರು ಗಳನ್ನು ಕುಷ್ಟಗಿ ಟಗರು ಸೆಣೆಸಾಡಿ ಮಹಾ ಬಲಾಢ್ಯ ಎನಿಸಿಕೊಂಡಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಗುಡದೂರಿನ ಬಲಿಷ್ಠ ಟಗರಿನ ಜೊತೆಗೆ ತೀವ್ರ ಸೆಣಸಾಡಿ ಕೊನೆಗೆ ಗೆದ್ದ ಕುಷ್ಟಗಿ ಟಗರು, ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಬಹುಮಾನವಾಗಿ ಪಡೆದುಕೊಂಡಿದೆ.

ಹರ್ಷ: ರಾಜ್ಯದ ಐದು ಕಡೆಗಳಲ್ಲಿ ನಡೆದ ಓಪನ್ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಮ್ಮ ಟಗರು ಭಾಗವಹಿಸಿತ್ತು. ಸ್ವಲ್ಪ ಅಂತರದಲ್ಲಿಯೇ ಸೋತಿತ್ತು. ಆದರೆ ಎದುರಾಳಿ ಟಗುರುಗಳಿಗೆ ಸಾಕಷ್ಟು ಹಾನಿ ಮಾಡಿತ್ತು.

ಒಟ್ಟು 5 ರಾಜ್ಯ ಮಟ್ಟದ ಕಾಳಗ ಸ್ಪರ್ಧೆಗಳಲ್ಲಿ ಎರಡರಲ್ಲಿ ಗೆದ್ದು ಬಹುಮಾನ ಗೆದ್ದುಕೊಟ್ಟಿದೆ. ಈ ಹಿಂದೆ ಸೂಳಿಬಾವಿಯಲ್ಲಿ ನಡೆದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು 30 ಸಾವಿರ ರೂ. ನಗುದು ಬಹುಮಾನಗಳಿಸಿ ಕೊಟ್ಟಿದೆ. ಮುಂದಿನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಲಿದೆ ಎಂಬ ವಿಶ್ವಾಸ ನಮಗಿತ್ತು.

ಇದನ್ನೂ ಓದಿ: Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

ಸದ್ಯದ ಕುಂಬಳಾವತಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ನಮಗೆ ಬಹುಮಾನವಾಗಿ ಬೈಕ್ ತಂದುಕೊಟ್ಟ ನಮ್ಮ ಬಲಾಢ್ಯ ಟಗರಿನ ಬಗ್ಗೆ ನಮಗೆ ಹೆಮ್ಮೆ ಇದೆ. ಅದನ್ನು ಪ್ರೀತಿಯಿಂದ ಗಾಂಧಿನಗರ ಗೂಳಿ ಎಂತಲೇ ಕರೆಯುತ್ತೇವೆ ಎಂದು ಹರುಷ ವ್ಯಕ್ತ ಪಡಿಸುತ್ತಾರೆ ಕುಷ್ಟಗಿ ಟಗರಿನ ಮಾಲೀಕರಾದ ಜಂಬಣ್ಣ ಡೊಳ್ಳಿನ ಸಾ.ಬೆಂಚಮಟ್ಟಿ ಹಾಗೂ ದಾವಲ್ ಕಾಯಗಡ್ಡಿ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ