Tagaru who won the competition and got on the bike

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಕುಷ್ಟಗಿ : ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಕುಷ್ಟಗಿ ಟಗರು ಸೆಣಸಾಡಿ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಹೊಸ ಬೈಕ್ ಗೆದ್ದುಕೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶ್ರಾವಣ ಮಾಸದ ನಿಮಿತ್ತ ಕುಂಬಳಾವತಿ ಗ್ರಾಮದ ಶ್ರೀದ್ಯಾಮಾಂಭಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಟಗರಿನ ಕಾಳಗ ಓಪನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಕಡೆಯಿಂದ 8 ಹಲ್ಲಿನ 40ಕ್ಕೂ ಹೆಚ್ಚು ಟಗರುಗಳು ಭಾಗವಹಿಸಿದ್ದವು.

4 ಸುತ್ತುಗಳ ಈ ಸ್ಪರ್ಧೆಯಲ್ಲಿ ಬಲಾಢ್ಯ ಎದುರಾಳಿ ಟಗರು ಗಳನ್ನು ಕುಷ್ಟಗಿ ಟಗರು ಸೆಣೆಸಾಡಿ ಮಹಾ ಬಲಾಢ್ಯ ಎನಿಸಿಕೊಂಡಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಗುಡದೂರಿನ ಬಲಿಷ್ಠ ಟಗರಿನ ಜೊತೆಗೆ ತೀವ್ರ ಸೆಣಸಾಡಿ ಕೊನೆಗೆ ಗೆದ್ದ ಕುಷ್ಟಗಿ ಟಗರು, ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಬಹುಮಾನವಾಗಿ ಪಡೆದುಕೊಂಡಿದೆ.

ಹರ್ಷ: ರಾಜ್ಯದ ಐದು ಕಡೆಗಳಲ್ಲಿ ನಡೆದ ಓಪನ್ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಮ್ಮ ಟಗರು ಭಾಗವಹಿಸಿತ್ತು. ಸ್ವಲ್ಪ ಅಂತರದಲ್ಲಿಯೇ ಸೋತಿತ್ತು. ಆದರೆ ಎದುರಾಳಿ ಟಗುರುಗಳಿಗೆ ಸಾಕಷ್ಟು ಹಾನಿ ಮಾಡಿತ್ತು.

ಒಟ್ಟು 5 ರಾಜ್ಯ ಮಟ್ಟದ ಕಾಳಗ ಸ್ಪರ್ಧೆಗಳಲ್ಲಿ ಎರಡರಲ್ಲಿ ಗೆದ್ದು ಬಹುಮಾನ ಗೆದ್ದುಕೊಟ್ಟಿದೆ. ಈ ಹಿಂದೆ ಸೂಳಿಬಾವಿಯಲ್ಲಿ ನಡೆದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು 30 ಸಾವಿರ ರೂ. ನಗುದು ಬಹುಮಾನಗಳಿಸಿ ಕೊಟ್ಟಿದೆ. ಮುಂದಿನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಲಿದೆ ಎಂಬ ವಿಶ್ವಾಸ ನಮಗಿತ್ತು.

ಇದನ್ನೂ ಓದಿ: Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

ಸದ್ಯದ ಕುಂಬಳಾವತಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ನಮಗೆ ಬಹುಮಾನವಾಗಿ ಬೈಕ್ ತಂದುಕೊಟ್ಟ ನಮ್ಮ ಬಲಾಢ್ಯ ಟಗರಿನ ಬಗ್ಗೆ ನಮಗೆ ಹೆಮ್ಮೆ ಇದೆ. ಅದನ್ನು ಪ್ರೀತಿಯಿಂದ ಗಾಂಧಿನಗರ ಗೂಳಿ ಎಂತಲೇ ಕರೆಯುತ್ತೇವೆ ಎಂದು ಹರುಷ ವ್ಯಕ್ತ ಪಡಿಸುತ್ತಾರೆ ಕುಷ್ಟಗಿ ಟಗರಿನ ಮಾಲೀಕರಾದ ಜಂಬಣ್ಣ ಡೊಳ್ಳಿನ ಸಾ.ಬೆಂಚಮಟ್ಟಿ ಹಾಗೂ ದಾವಲ್ ಕಾಯಗಡ್ಡಿ.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.