Tagaru who won the competition and got on the bike

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಕುಷ್ಟಗಿ : ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಕುಷ್ಟಗಿ ಟಗರು ಸೆಣಸಾಡಿ ಅಂದಾಜು 1 ಲಕ್ಷ ರೂಪಾಯಿ ಬೆಲೆ ಬಾಳುವ ಹೊಸ ಬೈಕ್ ಗೆದ್ದುಕೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶ್ರಾವಣ ಮಾಸದ ನಿಮಿತ್ತ ಕುಂಬಳಾವತಿ ಗ್ರಾಮದ ಶ್ರೀದ್ಯಾಮಾಂಭಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಟಗರಿನ ಕಾಳಗ ಓಪನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಕಡೆಯಿಂದ 8 ಹಲ್ಲಿನ 40ಕ್ಕೂ ಹೆಚ್ಚು ಟಗರುಗಳು ಭಾಗವಹಿಸಿದ್ದವು.

4 ಸುತ್ತುಗಳ ಈ ಸ್ಪರ್ಧೆಯಲ್ಲಿ ಬಲಾಢ್ಯ ಎದುರಾಳಿ ಟಗರು ಗಳನ್ನು ಕುಷ್ಟಗಿ ಟಗರು ಸೆಣೆಸಾಡಿ ಮಹಾ ಬಲಾಢ್ಯ ಎನಿಸಿಕೊಂಡಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಗುಡದೂರಿನ ಬಲಿಷ್ಠ ಟಗರಿನ ಜೊತೆಗೆ ತೀವ್ರ ಸೆಣಸಾಡಿ ಕೊನೆಗೆ ಗೆದ್ದ ಕುಷ್ಟಗಿ ಟಗರು, ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಬಹುಮಾನವಾಗಿ ಪಡೆದುಕೊಂಡಿದೆ.

ಹರ್ಷ: ರಾಜ್ಯದ ಐದು ಕಡೆಗಳಲ್ಲಿ ನಡೆದ ಓಪನ್ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಮ್ಮ ಟಗರು ಭಾಗವಹಿಸಿತ್ತು. ಸ್ವಲ್ಪ ಅಂತರದಲ್ಲಿಯೇ ಸೋತಿತ್ತು. ಆದರೆ ಎದುರಾಳಿ ಟಗುರುಗಳಿಗೆ ಸಾಕಷ್ಟು ಹಾನಿ ಮಾಡಿತ್ತು.

ಒಟ್ಟು 5 ರಾಜ್ಯ ಮಟ್ಟದ ಕಾಳಗ ಸ್ಪರ್ಧೆಗಳಲ್ಲಿ ಎರಡರಲ್ಲಿ ಗೆದ್ದು ಬಹುಮಾನ ಗೆದ್ದುಕೊಟ್ಟಿದೆ. ಈ ಹಿಂದೆ ಸೂಳಿಬಾವಿಯಲ್ಲಿ ನಡೆದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು 30 ಸಾವಿರ ರೂ. ನಗುದು ಬಹುಮಾನಗಳಿಸಿ ಕೊಟ್ಟಿದೆ. ಮುಂದಿನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಲಿದೆ ಎಂಬ ವಿಶ್ವಾಸ ನಮಗಿತ್ತು.

ಇದನ್ನೂ ಓದಿ: Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

ಸದ್ಯದ ಕುಂಬಳಾವತಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ನಮಗೆ ಬಹುಮಾನವಾಗಿ ಬೈಕ್ ತಂದುಕೊಟ್ಟ ನಮ್ಮ ಬಲಾಢ್ಯ ಟಗರಿನ ಬಗ್ಗೆ ನಮಗೆ ಹೆಮ್ಮೆ ಇದೆ. ಅದನ್ನು ಪ್ರೀತಿಯಿಂದ ಗಾಂಧಿನಗರ ಗೂಳಿ ಎಂತಲೇ ಕರೆಯುತ್ತೇವೆ ಎಂದು ಹರುಷ ವ್ಯಕ್ತ ಪಡಿಸುತ್ತಾರೆ ಕುಷ್ಟಗಿ ಟಗರಿನ ಮಾಲೀಕರಾದ ಜಂಬಣ್ಣ ಡೊಳ್ಳಿನ ಸಾ.ಬೆಂಚಮಟ್ಟಿ ಹಾಗೂ ದಾವಲ್ ಕಾಯಗಡ್ಡಿ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600